Monday 18 June, 2007

ಆರನೆಯ ಚಿತ್ರ









Satish ಚಿತ್ರದೊಳಗಿನ ನಿರಾಶೆಗೆ, ನಿರ್ಲಿಪ್ತತೆಗೆ ದನಿಯಾಗಿದ್ದಾರೆ...

ನಾವಿರುವ ದೇಶ ಹಳ್ಳಿ

ಬಡತನದಿ ಸೊರಗಿ ಬಿಸಿಲಿನಲಿ ಕರಗಿ
ಅರಿತಿಹೆವು ಇಹದ ಮರ್ಮ
ತಂಪಿನಲಿ ಕುಳಿತ ಬಿಳಿ ಅಂಗಿ ಜನರು
ಕಂಡಿಹರೆ ನಮ್ಮ ಕರ್ಮ

ಇಂದಿನಾ ಕೂಳು ಮುಂದಿನಾ ಬಾಳು
ನಮ್ಮ ನೋಟ ಕಟ್ಟ ಕಡೆಗೆ
ದಿನದಿನವು ನಿಮ್ಮ ಮುನ್ನಡೆಸುತಿರಲಿ
ನಾವು ಕೊಟ್ಟ ತೆರಿಗೆ

ಕಳವಳದ ಕಣ್ಣು ತಳಮಳವೆ ಇನ್ನು
ನೆರಳನೂ ಸುತ್ತೋ ಬಳ್ಳಿ
ಎದೆ ನಿಮದು ಎದ್ದು ಹಾರಿದರೆ ಏನು
ನಾವಿರುವ ದೇಶ ಹಳ್ಳಿ

ಕೈಗಂಟು ಮಂಡಿ ಬರಿ ಕಾಲ ಬಂಡಿ
ಸೂರಾಗೆ ಹುಲ್ಲು ಹಾಸು
ತಿಳುವಳಿಕೆ ಬೆಳೆದು ಅರಿವಳಿಕೆ ಕಳೆದು
ದೂರಾಗೆ ನಮ್ಮ ಕಾಸು

ವರುಷಗಳು ಉರುಳಿ ಪ್ರತಿ ಪಕ್ಷ ತೆರಳಿ
ದಿನಕೊಂದು ರಾಜ ಮಂತ್ರ
ನಮ್ಮೊಳಗಿನಾ ಸ್ವರವು ಬದಲಾಗದಾಯ್ತು
ಉಳಿದಿಹುದೇ ಹೊಸತು ತಂತ್ರ


ಸಿಂಧು Sindhu ಇಲ್ಲಿ ಚೋಮನದುಡಿಯ ಬೆಳ್ಳಿಯರನ್ನು ಕಂಡಿದ್ದಾರೆ, ಅವರನ್ನು ಚಿತ್ರ ತೆಗೆದವರ ಜತೆ ಮಾತಾಡಿಸಿದ್ದಾರೆ...

ಬೆಳ್ಳಿಯರು..

ನೆರಳಿನಲ್ಲಿ ಅವಳು, ಬೆಳಕಿನಲ್ಲಿ ಇವಳು
ಬೆಂಗಡೆ ಹಬ್ಬಿದ ತೊಂಡೆಬಳ್ಳಿಯ ಕುಳಿರು.
ನೆರಳ ತಂಪು ಸುಖವೊ, ಬೆಳಕ ಹೊಳಪು ಚೆಲುವೊ?
ನಕ್ಕ ನಗೆಯಲ್ಲಿ ಇಣುಕಿದ್ದು ನಾಚಿಕೆಯ ಮುಳ್ಳೊ?
ಕಡ್ಡಿಪುಡಿ ತಿಂದು ಕಪ್ಪಗಿದ್ದರು ಹೊಳೆವ ಹಲ್ಲೊ?
ಚೋಮನ ಬೆಳ್ಳಿಯ ಹಲ ರೂಪಗಳೊ?
ಫ್ಯಾಶನ್ ಬಿಚ್ಚಮ್ಮಗಳ ಅಣಕಗಳೋ?

ಉರಿಬಿಸಿಲಲ್ಲಿ, ಹೂಟಿ ಮಾಡಿ ಸುಸ್ತಾಗಿ ಆಸರಿಗೆ ಕೂತ್ರೆ ಕೂಸೆ,
ನೀ ಯೆಂತ ಕಪ್ಪು ಡಬ್ಬಿ ಹಿಡಿದು ಬಣ್ಣದ ಚಿತ್ರ ತೆಗಿಯೂದು
ಅಂದು ನಕ್ಕವರ ನಗುವಲ್ಲಿ -
ವಿಷಾದ ಕಂಡಿತೆ - ನಿಮ್ಮದು ಕೆಂಪು ಹಾದಿ, ದಲಿತ ಚಳುವಳಿಯೂ ಇರಬಹುದು..
ರಸ್ಟಿಕ್ ಬ್ಯೂಟಿ ಅನಿಸಿತೆ - ಇಂಗ್ಲಿಷ್ ಕವಿತೆ ಓದಿ ಕನ್ನಡ ಬರೆವವರ ಬೀದಿ,
ಅಯ್ಯೋ ಇದೆಲ್ಲ ನೋಡಕ್ಕೆ ಸಮಯವೆಲ್ಲಿ ಅಂದಿರೇ - ಯಶಸ್ಸಿನ ಬೆನ್ನು ಹತ್ತಿದ ಬಿಸಿನೆಸ್, ಐಟಿ-ಬೀಟಿ ಮಂದಿ..
ಬದುಕಿನ ಬನಿ ಹನಿಯಾಗಿ ಹರಿಯಿತೆ-
ಒಲವು ಚೆಲುವು ಅಳಲು ಕೂಡಿ ನಕ್ಕ ನೂರು ನೋಟ ಕಂಡಿತೆ?
ಹಾಗಿದ್ದರೆ, ನೀವು ನೊಂದ ಹೃದಯದ ಹಾಡು ಕೇಳುತ ಜೊತೆಗೂ ಹಾಡಿ,
ವರ್ಗೀಕರಣವೆಲ್ಲ ನಮಗೇಕೆ, ರಾಜಕೀಯಕ್ಕೆ, ಮಾಧ್ಯಮಗಳಿಗೆ ಬಿಡಿ.

ಅವರನ್ನೇ ಕೇಳಿ, ನಕ್ಕು, ಹಿಂದೆ ಒರಸಿಕೊಳ್ಳುತ್ತಾ ಎದ್ದು ಹೋಗುತ್ತಾರೆ,
ಆಸರಿ ಕುಡಿದಾಯಿತು, ಕೆಲಸ ಮಾಡಲು ಬಿಡಿ...

2 comments:

Satish said...

ನಾವಿರುವ ದೇಶ ಹಳ್ಳಿ

ಬಡತನದಿ ಸೊರಗಿ ಬಿಸಿಲಿನಲಿ ಕರಗಿ
ಅರಿತಿಹೆವು ಇಹದ ಮರ್ಮ
ತಂಪಿನಲಿ ಕುಳಿತ ಬಿಳಿ ಅಂಗಿ ಜನರು
ಕಂಡಿಹರೆ ನಮ್ಮ ಕರ್ಮ|

ಇಂದಿನಾ ಕೂಳು ಮುಂದಿನಾ ಬಾಳು
ನಮ್ಮ ನೋಟ ಕಟ್ಟ ಕಡೆಗೆ
ದಿನದಿನವು ನಿಮ್ಮ ಮುನ್ನಡೆಸುತಿರಲಿ
ನಾವು ಕೊಟ್ಟ ತೆರಿಗೆ|

ಕಳವಳದ ಕಣ್ಣು ತಳಮಳವೆ ಇನ್ನು
ನೆರಳನೂ ಸುತ್ತೋ ಬಳ್ಳಿ
ಎದೆ ನಿಮದು ಎದ್ದು ಹಾರಿದರೆ ಏನು
ನಾವಿರುವ ದೇಶ ಹಳ್ಳಿ|

ಕೈಗಂಟು ಮಂಡಿ ಬರಿ ಕಾಲ ಬಂಡಿ
ಸೂರಾಗೆ ಹುಲ್ಲು ಹಾಸು
ತಿಳುವಳಿಕೆ ಬೆಳೆದು ಅರಿವಳಿಕೆ ಕಳೆದು
ದೂರಾಗೆ ನಮ್ಮ ಕಾಸು|

ವರುಷಗಳು ಉರುಳಿ ಪ್ರತಿ ಪಕ್ಷ ತೆರಳಿ
ದಿನಕೊಂದು ರಾಜ ಮಂತ್ರ
ನಮ್ಮೊಳಗಿನಾ ಸ್ವರವು ಬದಲಾಗದಾಯ್ತು
ಉಳಿದಿಹುದೇ ಹೊಸತು ತಂತ್ರ|

ಸಿಂಧು sindhu said...

ಬೆಳ್ಳಿಯರು..

ನೆರಳಿನಲ್ಲಿ ಅವಳು, ಬೆಳಕಿನಲ್ಲಿ ಇವಳು
ಬೆಂಗಡೆ ಹಬ್ಬಿದ ತೊಂಡೆಬಳ್ಳಿಯ ಕುಳಿರು.
ನೆರಳ ತಂಪು ಸುಖವೊ, ಬೆಳಕ ಹೊಳಪು ಚೆಲುವೊ?
ನಕ್ಕ ನಗೆಯಲ್ಲಿ ಇಣುಕಿದ್ದು ನಾಚಿಕೆಯ ಮುಳ್ಳೊ?
ಕಡ್ಡಿಪುಡಿ ತಿಂದು ಕಪ್ಪಗಿದ್ದರು ಹೊಳೆವ ಹಲ್ಲೊ?
ಚೋಮನ ಬೆಳ್ಳಿಯ ಹಲ ರೂಪಗಳೊ?
ಫ್ಯಾಶನ್ ಬಿಚ್ಚಮ್ಮಗಳ ಅಣಕಗಳೋ?

ಉರಿಬಿಸಿಲಲ್ಲಿ, ಹೂಟಿ ಮಾಡಿ ಸುಸ್ತಾಗಿ ಆಸರಿಗೆ ಕೂತ್ರೆ ಕೂಸೆ,
ನೀ ಯೆಂತ ಕಪ್ಪು ಡಬ್ಬಿ ಹಿಡಿದು ಬಣ್ಣದ ಚಿತ್ರ ತೆಗಿಯೂದು
ಅಂದು ನಕ್ಕವರ ನಗುವಲ್ಲಿ -
ವಿಷಾದ ಕಂಡಿತೆ - ನಿಮ್ಮದು ಕೆಂಪು ಹಾದಿ, ದಲಿತ ಚಳುವಳಿಯೂ ಇರಬಹುದು..
ರಸ್ಟಿಕ್ ಬ್ಯೂಟಿ ಅನಿಸಿತೆ - ಇಂಗ್ಲಿಷ್ ಕವಿತೆ ಓದಿ ಕನ್ನಡ ಬರೆವವರ ಬೀದಿ,
ಅಯ್ಯೋ ಇದೆಲ್ಲ ನೋಡಕ್ಕೆ ಸಮಯವೆಲ್ಲಿ ಅಂದಿರೇ - ಯಶಸ್ಸಿನ ಬೆನ್ನು ಹತ್ತಿದ ಬಿಸಿನೆಸ್, ಐಟಿ-ಬೀಟಿ ಮಂದಿ..
ಬದುಕಿನ ಬನಿ ಹನಿಯಾಗಿ ಹರಿಯಿತೆ-
ಒಲವು ಚೆಲುವು ಅಳಲು ಕೂಡಿ ನಕ್ಕ ನೂರು ನೋಟ ಕಂಡಿತೆ?
ಹಾಗಿದ್ದರೆ, ನೀವು ನೊಂದ ಹೃದಯದ ಹಾಡು ಕೇಳುತ ಜೊತೆಗೂ ಹಾಡಿ,
ವರ್ಗೀಕರಣವೆಲ್ಲ ನಮಗೇಕೆ, ರಾಜಕೀಯಕ್ಕೆ, ಮಾಧ್ಯಮಗಳಿಗೆ ಬಿಡಿ.

ಅವರನ್ನೇ ಕೇಳಿ, ನಕ್ಕು, ಹಿಂದೆ ಒರಸಿಕೊಳ್ಳುತ್ತಾ ಎದ್ದು ಹೋಗುತ್ತಾರೆ,
ಆಸರಿ ಕುಡಿದಾಯಿತು, ಕೆಲಸ ಮಾಡಲು ಬಿಡಿ...