Monday 2 June, 2008

ಚಿತ್ರ ೫೬




ಚಿತ್ರ ೫೬ ಕ್ಕೆ ಕುಮಾರ ಸ್ವಾಮಿ ಕಡಾಕೊಳ್ಳ, ತವಿಶ್ರೀ ಮತ್ತು ಸತೀಶ್ ಅವರು ಕವನಗಳನ್ನ ಬರೆದಿದ್ದಾರೆ.

ಕುಮಾರ ಸ್ವಾಮಿ ಕಡಾಕೊಳ್ಳ ಅವರ ಕವನ -
ಹಸುಳೆ

ಹಾಲುಗಲ್ಲದ ಹಸುಳೆ
ತೂಗಾಡುವ ತಲೆಯೆ
ತೊದಲಾಡುವ ನುಡಿಯೆ
ಹಾಲು ಮೆತ್ತಿದ ತುಟಿಗಳೇ
ತೊಡಕಾಗುವ ಹೆಜ್ಜೆಗಳೇ
ಕಾಂತಿಯುಕ್ಕುವ ಕಂಗಳೇ
ಕಿಲಕಿಲ ಮಂಜುಳ ನಗುವೆ
ಕೆದರಿದ ನಯ ಕೂದಲೇ
ಕರಿ ಕಾಡಿಗೆ ಸಿಂಚಿತೆ
ಕಿವಿಯ ಓಲೆಯ ಭೂಷಿತೆ
ಸುಕೋಮಲ ಸ್ಪರ್ಷವೆ
ನೆಲದ ಮೇಲೆ ತೆವಳುವೆ
ಬಿಸಿಲ ಕುದುರೆ ಏರುವೆ
ಹಸಿವನು ಕಣ್ಣೀರಲೇ ತೋರುವೆ
ಕೋಪಕೆ ನಿನಗಾರು ಸರಿಯೇ
ಸಿಕ್ಕಿದ್ದೆಲ್ಲ ನಿನ್ನ ಆಯುಧವೆ
ಚಂದ್ರನನೇ ಬೇಕೆನ್ನುವೆ
ಬೆಂಕಿಯಲ್ಲಿಯು ನುಗ್ಗುವೆ
ಹುಲಿಯ ಬೆನ್ನನ್ನಾದರು ಏರುವೆ
ಅಂಜಿಕೆ ನಿನಗೆಲ್ಲಿದೆ?
ಅಮ್ಮನನು ಬಿಡದಪ್ಪುವೆ
ಅವಳೇ ಬೇಕು ಸಧಾ ನಿನಗೆ
ಎಲ್ಲರಲು ಪ್ರೀತಿಯುಕ್ಕಿಸುವೆ
ನಿನಗೆ ಆದೇವನು ಸಮವೆ?

** ಕುಕೂಊs....
ಪುಣೆ


ತವಿಶ್ರೀ ಅವರ ಕವನ -
ಮಗುವಿನ ಕೋರಿಕೆ

ಕೈನಲಿರುವುದು ಏನದು
ಆಟದ ಸಾಮಾನಿನಂತೆ ತೋರುವುದು
ನನ್ನ ಕೈಗೆ ಕೊಡೋ
ಕೊಡದಿರೆ ಅಮ್ಮನ ಕರೆವೆ

ನೀ ಚಿತ್ರ ತೆಗೆಯುವೆಯಾ
ಅಮ್ಮ ಮೊಗವ ತೊಳೆವರೆಗೆ ಕಾಯುವೆಯಾ
ಮೊಗದಲಿ ಲೇಪಿಸಿಲ್ಲ ಪವುಡರು
ಬದಲಿಸಿಲ್ಲ ಬೆಳಗಿನ ದಿರಿಸು
ಸ್ವಲ್ಪ ಕಾಲ ತಡೆಯುವೆಯಾ?

ಮೊಂಡಂತೆ ನನ್ನ ಮೂಗು
ಬೊಚ್ಚಂತೆ ನನ್ನ ಬಾಯಿ
ಕೆದರಿದೆಯಂತೆ ತಲೆಗೂದಲು
ಪಿಸಿರು ಕಾಣುವುದಂತೆ ಕಣ್ಣಲಿ
ಇವಾವುದೂ ಬಾರದ ಚಿತ್ರ ತೆಗೆಯುವೆಯಾ?

ಅವರಿವರ ಮಾತಿಗೆ ನೀ ಹೆದರಬೇಡ
ಎನ್ನ ಚಿತ್ರ ತೆಗೆಯಲು ದೃಷ್ಟಿಯಾಗದು
ತಗುಲದಂತೆ ಹಚ್ಚಿದೆಯಲ್ಲ ಬೊಟ್ಟು
ನೋಡುವೆಯಾ!
ಒಮ್ಮೆ ಆ ಡಬ್ಬ ನನ್ನ ಕೈಗೆ ಕೊಟ್ಟು

ಸುಂದರ ಚಿತ್ರ ನೀ ತೆಗೆದುಕೊಡಲು
ರೂಪದರ್ಶಿ ನಾನಾಗಬಲ್ಲೆ
ಒಂದೆಳೆ ಸರವ ನೂರೆಳೆ ಮಾಡಬಲ್ಲೆ
ಅದರಲಿ ನಿನಗೂ ಪಾಲು ಕೊಡಬಲ್ಲೆ
ತೆಗೆಯುವೆಯಾ ಸುಂದರ ಚಿತ್ರ ಒಂದನು?


ಸತೀಶ್ ಅವರ ಕವನ -
ನಮ್ಮ ಮನೆಯ ಪುಟ್ಟ ಪಾಪ

ಎನೇನೋ ಬೊಟ್ಟುಗಳನ್ನು ತಿದ್ದಿ ತೀಡಿದ ಅಮ್ಮ
ಮುದ್ದಿಸಿ ಮಲಗದಿರೆ ಹೆದರಿಸಿ ಬರುವನೆಂದು ಗುಮ್ಮ
ಸಂಪ್ರದಾಯವೆಂದು ದೊಡ್ಡ ರೂಪವೊಂದನು ಕೊಟ್ಟು
ಆಸೆ ಮೋಡಗಳ ಕುರುಳನು ಹಾಗೇ ಹಾರಲು ಬಿಟ್ಟು.

ಮಲಗಿದಲ್ಲೇ ಹಣೆ ನೇವರಿಸಿ ದಿವ್ಯ ದಿರಿಸು ತೊಟ್ಟ ತಂದೆ
ಹುಟ್ಟುವ ಸೂರ್ಯನ ಜೊತೆ ಆರಂಭವಾಗುವ ದಂದೆ
ವಾರಕ್ಕೆರಡೇ ದಿನ ಮುಖ ನೋಡುವುದಕ್ಕೆ ಸಿಕ್ಕು
ರಾತ್ರಿ ಉಂಡು ಮಲಗಿದ ನಂತರ ನೋಡಿ ನಕ್ಕು.

ಕುಟುಂಬ ಯೋಜನೆಯ ಫಲವೋ ಜಾಗತಿಕರಣದ ಒಲವೋ
ನಮ್ಮ ಚಿಕ್ಕ ಕುಟುಂಬಗಳ ಬೆರಳೆಣಿಕೆಯ ಜನರ ಬಲವೋ
ತಮ್ಮನಿದ್ದರೆ ತಂಗಿಯಿಲ್ಲ, ತಂಗಿಯಿರೆ ಅಕ್ಕನಿಲ್ಲದ ಬಳಗ
ಅತ್ತು ಕರೆಯುವುದಿರಲಿ ಕಿತ್ತು ಖುಷಿ ಪಡಲೂ ಬಾರದ ವಾಲಗ.

ದಿವ್ಯತೆ ಇರಲಿ ಇಲ್ಲದಿರಲೀ ದೂರದೃಷ್ಟಿ ಇರಲೇ ಬೇಕಾದ ಕಾಲ
ಸುತ್ತಲೂ ಸ್ಪರ್ಧೆಯನು ಮೈಗೂಡಿಸಿಕೊಂಡಿರುವ ನೆಲ-ಜಲ.

3 comments:

ಕುಕೂಊ.. said...

** ಹಸುಳೆ **

ಹಾಲುಗಲ್ಲದ ಹಸುಳೆ
ತೂಗಾಡುವ ತಲೆಯೆ
ತೊದಲಾಡುವ ನುಡಿಯೆ
ಹಾಲು ಮೆತ್ತಿದ ತುಟಿಗಳೇ
ತೊಡಕಾಗುವ ಹೆಜ್ಜೆಗಳೇ
ಕಾಂತಿಯುಕ್ಕುವ ಕಂಗಳೇ
ಕಿಲಕಿಲ ಮಂಜುಳ ನಗುವೆ
ಕೆದರಿದ ನಯ ಕೂದಲೇ
ಕರಿ ಕಾಡಿಗೆ ಸಿಂಚಿತೆ
ಕಿವಿಯ ಓಲೆಯ ಭೂಷಿತೆ
ಸುಕೋಮಲ ಸ್ಪರ್ಷವೆ
ನೆಲದ ಮೇಲೆ ತೆವಳುವೆ
ಬಿಸಿಲ ಕುದುರೆ ಏರುವೆ
ಹಸಿವನು ಕಣ್ಣೀರಲೇ ತೋರುವೆ
ಕೋಪಕೆ ನಿನಗಾರು ಸರಿಯೇ
ಸಿಕ್ಕಿದ್ದೆಲ್ಲ ನಿನ್ನ ಆಯುಧವೆ
ಚಂದ್ರನನೇ ಬೇಕೆನ್ನುವೆ
ಬೆಂಕಿಯಲ್ಲಿಯು ನುಗ್ಗುವೆ
ಹುಲಿಯ ಬೆನ್ನನ್ನಾದರು ಏರುವೆ
ಅಂಜಿಕೆ ನಿನಗೆಲ್ಲಿದೆ?
ಅಮ್ಮನನು ಬಿಡದಪ್ಪುವೆ
ಅವಳೇ ಬೇಕು ಸಧಾ ನಿನಗೆ
ಎಲ್ಲರಲು ಪ್ರೀತಿಯುಕ್ಕಿಸುವೆ
ನಿನಗೆ ಆದೇವನು ಸಮವೆ?

** ಕುಕೂಊs....
ಪುಣೆ
7/06/08

bhadra said...

ಮಗುವಿನ ಕೋರಿಕೆ

ಕೈನಲಿರುವುದು ಏನದು
ಆಟದ ಸಾಮಾನಿನಂತೆ ತೋರುವುದು
ನನ್ನ ಕೈಗೆ ಕೊಡೋ
ಕೊಡದಿರೆ ಅಮ್ಮನ ಕರೆವೆ

ನೀ ಚಿತ್ರ ತೆಗೆಯುವೆಯಾ
ಅಮ್ಮ ಮೊಗವ ತೊಳೆವರೆಗೆ ಕಾಯುವೆಯಾ
ಮೊಗದಲಿ ಲೇಪಿಸಿಲ್ಲ ಪವುಡರು
ಬದಲಿಸಿಲ್ಲ ಬೆಳಗಿನ ದಿರಿಸು
ಸ್ವಲ್ಪ ಕಾಲ ತಡೆಯುವೆಯಾ?

ಮೊಂಡಂತೆ ನನ್ನ ಮೂಗು
ಬೊಚ್ಚಂತೆ ನನ್ನ ಬಾಯಿ
ಕೆದರಿದೆಯಂತೆ ತಲೆಗೂದಲು
ಪಿಸಿರು ಕಾಣುವುದಂತೆ ಕಣ್ಣಲಿ
ಇವಾವುದೂ ಬಾರದ ಚಿತ್ರ ತೆಗೆಯುವೆಯಾ?

ಅವರಿವರ ಮಾತಿಗೆ ನೀ ಹೆದರಬೇಡ
ಎನ್ನ ಚಿತ್ರ ತೆಗೆಯಲು ದೃಷ್ಟಿಯಾಗದು
ತಗುಲದಂತೆ ಹಚ್ಚಿದೆಯಲ್ಲ ಬೊಟ್ಟು
ನೋಡುವೆಯಾ!
ಒಮ್ಮೆ ಆ ಡಬ್ಬ ನನ್ನ ಕೈಗೆ ಕೊಟ್ಟು

ಸುಂದರ ಚಿತ್ರ ನೀ ತೆಗೆದುಕೊಡಲು
ರೂಪದರ್ಶಿ ನಾನಾಗಬಲ್ಲೆ
ಒಂದೆಳೆ ಸರವ ನೂರೆಳೆ ಮಾಡಬಲ್ಲೆ
ಅದರಲಿ ನಿನಗೂ ಪಾಲು ಕೊಡಬಲ್ಲೆ
ತೆಗೆಯುವೆಯಾ ಸುಂದರ ಚಿತ್ರ ಒಂದನು?

Satish said...

ನಮ್ಮ ಮನೆಯ ಪುಟ್ಟ ಪಾಪ

ಎನೇನೋ ಬೊಟ್ಟುಗಳನ್ನು ತಿದ್ದಿ ತೀಡಿದ ಅಮ್ಮ
ಮುದ್ದಿಸಿ ಮಲಗದಿರೆ ಹೆದರಿಸಿ ಬರುವನೆಂದು ಗುಮ್ಮ
ಸಂಪ್ರದಾಯವೆಂದು ದೊಡ್ಡ ರೂಪವೊಂದನು ಕೊಟ್ಟು
ಆಸೆ ಮೋಡಗಳ ಕುರುಳನು ಹಾಗೇ ಹಾರಲು ಬಿಟ್ಟು.

ಮಲಗಿದಲ್ಲೇ ಹಣೆ ನೇವರಿಸಿ ದಿವ್ಯ ದಿರಿಸು ತೊಟ್ಟ ತಂದೆ
ಹುಟ್ಟುವ ಸೂರ್ಯನ ಜೊತೆ ಆರಂಭವಾಗುವ ದಂದೆ
ವಾರಕ್ಕೆರಡೇ ದಿನ ಮುಖ ನೋಡುವುದಕ್ಕೆ ಸಿಕ್ಕು
ರಾತ್ರಿ ಉಂಡು ಮಲಗಿದ ನಂತರ ನೋಡಿ ನಕ್ಕು.

ಕುಟುಂಬ ಯೋಜನೆಯ ಫಲವೋ ಜಾಗತಿಕರಣದ ಒಲವೋ
ನಮ್ಮ ಚಿಕ್ಕ ಕುಟುಂಬಗಳ ಬೆರಳೆಣಿಕೆಯ ಜನರ ಬಲವೋ
ತಮ್ಮನಿದ್ದರೆ ತಂಗಿಯಿಲ್ಲ, ತಂಗಿಯಿರೆ ಅಕ್ಕನಿಲ್ಲದ ಬಳಗ
ಅತ್ತು ಕರೆಯುವುದಿರಲಿ ಕಿತ್ತು ಖುಷಿ ಪಡಲೂ ಬಾರದ ವಾಲಗ.

ದಿವ್ಯತೆ ಇರಲಿ ಇಲ್ಲದಿರಲೀ ದೂರದೃಷ್ಟಿ ಇರಲೇ ಬೇಕಾದ ಕಾಲ
ಸುತ್ತಲೂ ಸ್ಪರ್ಧೆಯನು ಮೈಗೂಡಿಸಿಕೊಂಡಿರುವ ನೆಲ-ಜಲ.