Monday 9 June, 2008

ಚಿತ್ರ ೫೭



ಚಿತ್ರ ೫೭ ಕ್ಕೆ ಟೀನಾ, ತವಿಶ್ರೀ ,ಸತೀಶ್ ಮತ್ತು ಕುಮಾರ ಸ್ವಾಮಿ ಕಡಾಕೊಳ್ಳ ಅವರು ಕವನಗಳನ್ನ ಬರೆದಿದ್ದಾರೆ.

ಟೀನಾ ಅವರ ಕವನ -
ಬೆಳಕು ಮುಗಿವ ಮುನ್ನ
.

ಇಲ್ಲಿ ನಾನು ಪುಸ್ತಕ ದೀಪ
ಜತೆಯಾಗಿ
ಕತ್ತಲೆಯ ಅನುಭೂತಿ
ಇನ್ನೇನು ಮುಗಿದೇಹೋಯಿತು ಎಣ್ಣೆ
ಅಕ್ಷರ ನುಂಗುವ
ಕಣ್ಣ ನೋಟ
ಕಾಣದ್ದ ಕಂಡುಕೊಂಡೇನೆ ನಾನು
ಎಂದಾದರು?
ಮುಗಿದು ಹೋಗಬಹುದು
ಪುಟ್ಟ ಹುಳಗಳ ಭರಾಟೆ
ಅಮ್ಮ ಎದ್ದು
ನಿದ್ದೆಯಲೆ ಮುದ್ದಾಗಿ
'ಎಣ್ಣೆ ತುಂಬಿಸಲೆ ಮಗು?
ಮಂದವಾಗಿದೆ ಬೆಳಕು
ಕಣ್ಣಿಗೆ ಪೆಟ್ಟು
ಕಾಫಿ ಬೇಕೆ?'
ಅಂದಂತೆ
ಅನ್ನಿಸಿ
ನಾನು ನೋಡುವೆ
ಬೆನ್ನಹುರಿಯಲ್ಲೇಳುವ
ನೋವ ಅದುಮಿ
ಆಕಳಿಸಿ
ಇದೆಲ್ಲವ ಒಳಗಿಳಿಸಬೇಕು
ಜೋಪಾನವಾಗಿ
ದೀಪದಲಿ
ಬೆಳಕು ಮುಗಿವ ಮುನ್ನ.


ತವಿಶ್ರೀ ಅವರ ಕವನ -

ಚಂಗನೆ ನೆಗೆಯುವ
ಮೃಗ, ಮನೆ ಮನಗಳ ಹಿಗ್ಗಿಸುವ
ಕಸ್ತೂರಿ
ಎನಗೆ ತಿಳಿದಿಹುದಿದೊಂದರದೇ ಅಕ್ಕರಗಳು
ಕನ್ನಡ ಎಂಬ ಕಸ್ತೂರಿ ಆಕರಗಳು
ಕಣ್ಮುಚ್ಚಿಯೂ ಓದಬಲ್ಲೆ
ಆ ಪದಗಳ
ಮುದ್ರಿಸಿರದ - ಮನಗಳು ಮೂಡಿಸುವ
ಆ ಮಾತುಗಳ

ಆದರೇನು!
ಪರೀಕ್ಷೆಯ ಎದುರಿಸಲು
ಅಮ್ಮನ ಕೆಂಗಣ್ಣ ತಂಪಾಗಿಸಲು
ಹಿಡಿಯಲೇಬೇಕು ಹೊತ್ತಿಗೆಯ
ನೆಡಲೇಬೇಕು ದೃಷ್ಟಿಯ
ಅಕ್ಷರಗಳ ಮೇಲೆ
ಓಡಿಸಲೇಬೇಕು ಪುಟಗಳ
ನನಗೇ ಮೋಸಿಸುವೆಯಾ
ಬೆಳಕೆಂಬ ರವಿಯ ಬಂಟ

ಹಿಗ್ಗಬೇಡ!
ನೀ ನೇಸರನ ಬಂಟನೆಂದು
ತಿಳಿಯದೇ ನಿನ ಶಕ್ತಿಯ
ನಾ ತಿಳಿಯನೇ ನಿನ್ನ

ಎತ್ತಲೋ ನೋಡುತಿಹ
ಎನಗೆ ಒಂದಗುಳು
ಬೆಳಕ ನೀಡದವ
ನೀ ನಿಷ್ಕರುಣಿ
ಕತ್ತಲಿಗ್ಯಾಕೆ ಬೇಕಿಹುದು
ನಿರುಪಯೋಗಿ ನಿನ್ನ ಕರುಣೆ

ತಿಳಿಯದೇ ನಾನೆಲ್ಲಿ
ನೋಡುತಿಹೆ
ಸಹಾಯಿಸಬಾರದೇ
ಎನ ಕಂಗಳಿಗೆ ದೃಷ್ಟಿಯ ನೀಡಲು
ಎತ್ತಲೋ ನೋಡುವ ನಿನಗಿರಲಿ
ಎನ ಬಹಿಷ್ಕಾರ
ಇಗೋ ಮುಚ್ಚುವೆ ಪುಸ್ತಕವ
ಹೊದೆಯುವೆ ಚಾದರವ
ಕಾಣುವೆ ಹಗಲು ಕಾಣದ ಕನಸ :P

ಸತೀಶ್ ಅವರ ಕವನ -
ಬೆಳಕಿನ ನಂಟು ಕತ್ತಲ ಗಂಟು.

ಅಂದು ಬ್ರಾಹ್ಮೀ ಮಹೂರ್ತದೆ ಎದ್ದು
ಆಗಾಗ್ಗೆ ಅಲ್ಲಲ್ಲಿ ತೂಕಡಿಸಿ ಬಿದ್ದು
ಹೊತ್ತಿಗೆಯ ಭಾರವನು ತಾ ಹೊತ್ತು
ಓದಿದ್ದೆಲ್ಲವು ತಲೆಗೆ ಹತ್ತದೆ ಬೇಸತ್ತು.

ಬುದ್ದಿವಂತರೊಳಗೆ ದಡ್ಡ ತಾನಾಗಿ
ದಡ್ಡರೊಳಗೆ ತನ್ನ ದಡ್ಡತನವ ನೀಗಿ
ಏನೋ ಹೇಳಿ ಇನ್ನೇನನ್ನೋ ಮಾಡಿ
ಪುಸ್ತಕದ ಬದನೆಕಾಯಿ ಪಲ್ಯದಿ ಬಾಡಿ.

ಓದಿ ಕಡಿದು ಕಟ್ಟಿ ಹಾಕಿದ ಸಮಯವೇ
ಇತಿಹಾಸ ಮರುಕಳಿಸುತಲೇ ಇಲ್ಲವೇ
ಮೈ ಮುರಿದು ಕೆಲಸ ಮಾಡುವ ಬದಲು
ಪುಸ್ತಕದ ನೆಪ ಹಾಸಿಗೆಯ ಸಂಗ ಹಗಲು.

ಈ ಹೊತ್ತಿಗೆಯ ಪದರಗಳು ಮೇಲೆ ಕೆಳಗೆ
ಬೆಳಕು ಕಾಣುವುದು ಒಂದೊಂದೇ ಪುಟಗಳಿಗೆ
ಒಂದು ಪುಟ ಬೆಳಕಿಗಾದಂತೆ ನಂಟು
ಉಳಿದವಕ್ಕಂತೂ ಸದಾ ಕತ್ತಲ ಗಂಟು.

ಕುಮಾರ ಸ್ವಾಮಿ ಕಡಾಕೊಳ್ಳ ಅವರ ಕವನ -
ಜ್ಞಾನದ ಸುಳಿವು.

ಕತ್ತಲೆಯ ನಮ್ಮ ಬದುಕನ್ನು
ಜ್ಞಾನ ತಿರೆಗೊಯ್ಯವ
ಅದೋ ಅಲ್ಲಿ ಹೊನಲು ಚೆಲ್ಲಿದೆ
ಇದೋ ಇಲ್ಲಿ ಹೊತ್ತಿಗೆ ಸಾರದೊಂದಿಗೆ

ಬಾಳು ಅಜ್ಞಾನದ ಸೆಳವು
ಬಿಡಿಸಿಕೊಳ್ಳಲು ಬೇಕು ಜ್ಞಾನದ
ಸುಳಿವು, ಅನುಭವಗಳ ತೆವಳು
ಎದೆಗುಂದದೆ ಹುಡುಕುವ ಗೀಳು

ಹುಡುಕೋಣ ಜ್ಞಾನವನ್ನು
ಅನುಭಗಳನು ಅಡಗಿಸಿಕೊಂಡು
ಹೊತ್ತಿಗೆಯಲ್ಲೂ ಭಿತ್ತಿಗಳಲ್ಲೂ
ಬಿತ್ತಿ ಬೆಳೆಸೋಣ ಜ್ಞಾನ ಬುದ್ಧಿಯನ್ನು

ಬೆಳಕಿನ ಬಲದಿಂದ ಕತ್ತಲೆಯ ಕೇಡು
ಜ್ಞಾನದ ಬಲದಿಂದ ಅಜ್ಞಾನದ ಕೇಡು
ಮೌನದ ಬಲದಿಂದ ಜಂಜಾಟದ ಕೇಡು
ಪ್ರೀತಿಯ ಬಲದಿಂದ ದ್ವೇಷದ ಕೇಡು

** ಕುಕೂಊ...

7 comments:

Tina said...

ಬೆಳಕು ಮುಗಿವ ಮುನ್ನ

ಇಲ್ಲಿ ನಾನು ಪುಸ್ತಕ ದೀಪ
ಜತೆಯಾಗಿ
ಕತ್ತಲೆಯ ಅನುಭೂತಿ
ಇನ್ನೇನು ಮುಗಿದೇಹೋಯಿತು ಎಣ್ಣೆ
ಅಕ್ಷರ ನುಂಗುವ
ಕಣ್ಣ ನೋಟ
ಕಾಣದ್ದ ಕಂಡುಕೊಂಡೇನೆ ನಾನು
ಎಂದಾದರು?
ಮುಗಿದು ಹೋಗಬಹುದು
ಪುಟ್ಟ ಹುಳಗಳ ಭರಾಟೆ
ಅಮ್ಮ ಎದ್ದು
ನಿದ್ದೆಯಲೆ ಮುದ್ದಾಗಿ
'ಎಣ್ಣೆ ತುಂಬಿಸಲೆ ಮಗು?
ಮಂದವಾಗಿದೆ ಬೆಳಕು
ಕಣ್ಣಿಗೆ ಪೆಟ್ಟು
ಕಾಫಿ ಬೇಕೆ?'
ಅಂದಂತೆ
ಅನ್ನಿಸಿ
ನಾನು ನೋಡುವೆ
ಬೆನ್ನಹುರಿಯಲ್ಲೇಳುವ
ನೋವ ಅದುಮಿ
ಆಕಳಿಸಿ
ಇದೆಲ್ಲವ ಒಳಗಿಳಿಸಬೇಕು
ಜೋಪಾನವಾಗಿ
ದೀಪದಲಿ
ಬೆಳಕು ಮುಗಿವ ಮುನ್ನ.

Tina said...

Chitrakavana team,
Kindly forgive me for not giving my name for the above poem, which I sent. This is Tina from www.tinazone.wordpress.com. Sorry of my google ID confused you. It has come up with a name 'Shashismiles' all by itself, which has confused many of my blogspot friends. hence, this clarification. Thank you!!
-Tina

Unknown said...

ಅದೇನೇ ಬರೆಯೋದಿದ್ರೂ ಕನ್ನಡದಲ್ಲಿಯೇ ಬರೆಯಿರಮ್ಮ / ಪ್ಪ
ಕಸ್ತೂರಿ ಮೃಗ ಇದೆಯೋ ಇಲ್ಲವೋ, ಅದರ ಸುವಾಸನೆ
ಎಲ್ಲರಿಗೂ ಲಭಿಸಿದೆಯೋ ಇಲ್ಲವೋ, ನಮ್ಮ ಸುಕೃತ ಫಲದಿಂದಾಗಿ ಕನ್ನಡ ಭಾಷೆ ನಮಗೆ ಲಭಿಸಿದೆ. ಅದನ್ನು ಉಳಿಸಿ, ಬೆಳೆಸೋಣ.

bhadra said...

ಚಂಗನೆ ನೆಗೆಯುವ
ಮೃಗ, ಮನೆ ಮನಗಳ ಹಿಗ್ಗಿಸುವ
ಕಸ್ತೂರಿ
ಎನಗೆ ತಿಳಿದಿಹುದಿದೊಂದರದೇ ಅಕ್ಕರಗಳು
ಕನ್ನಡ ಎಂಬ ಕಸ್ತೂರಿ ಆಕರಗಳು
ಕಣ್ಮುಚ್ಚಿಯೂ ಓದಬಲ್ಲೆ
ಆ ಪದಗಳ
ಮುದ್ರಿಸಿರದ - ಮನಗಳು ಮೂಡಿಸುವ
ಆ ಮಾತುಗಳ

ಆದರೇನು!
ಪರೀಕ್ಷೆಯ ಎದುರಿಸಲು
ಅಮ್ಮನ ಕೆಂಗಣ್ಣ ತಂಪಾಗಿಸಲು
ಹಿಡಿಯಲೇಬೇಕು ಹೊತ್ತಿಗೆಯ
ನೆಡಲೇಬೇಕು ದೃಷ್ಟಿಯ
ಅಕ್ಷರಗಳ ಮೇಲೆ
ಓಡಿಸಲೇಬೇಕು ಪುಟಗಳ
ನನಗೇ ಮೋಸಿಸುವೆಯಾ
ಬೆಳಕೆಂಬ ರವಿಯ ಬಂಟ

ಹಿಗ್ಗಬೇಡ!
ನೀ ನೇಸರನ ಬಂಟನೆಂದು
ತಿಳಿಯದೇ ನಿನ ಶಕ್ತಿಯ
ನಾ ತಿಳಿಯನೇ ನಿನ್ನ

ಎತ್ತಲೋ ನೋಡುತಿಹ
ಎನಗೆ ಒಂದಗುಳು
ಬೆಳಕ ನೀಡದವ
ನೀ ನಿಷ್ಕರುಣಿ
ಕತ್ತಲಿಗ್ಯಾಕೆ ಬೇಕಿಹುದು
ನಿರುಪಯೋಗಿ ನಿನ್ನ ಕರುಣೆ

ತಿಳಿಯದೇ ನಾನೆಲ್ಲಿ
ನೋಡುತಿಹೆ
ಸಹಾಯಿಸಬಾರದೇ
ಎನ ಕಂಗಳಿಗೆ ದೃಷ್ಟಿಯ ನೀಡಲು
ಎತ್ತಲೋ ನೋಡುವ ನಿನಗಿರಲಿ
ಎನ ಬಹಿಷ್ಕಾರ
ಇಗೋ ಮುಚ್ಚುವೆ ಪುಸ್ತಕವ
ಹೊದೆಯುವೆ ಚಾದರವ
ಕಾಣುವೆ ಹಗಲು ಕಾಣದ ಕನಸ :P

Satish said...

ಬೆಳಕಿನ ನಂಟು ಕತ್ತಲ ಗಂಟು

ಅಂದು ಬ್ರಾಹ್ಮೀ ಮಹೂರ್ತದೆ ಎದ್ದು
ಆಗಾಗ್ಗೆ ಅಲ್ಲಲ್ಲಿ ತೂಕಡಿಸಿ ಬಿದ್ದು
ಹೊತ್ತಿಗೆಯ ಭಾರವನು ತಾ ಹೊತ್ತು
ಓದಿದ್ದೆಲ್ಲವು ತಲೆಗೆ ಹತ್ತದೆ ಬೇಸತ್ತು.

ಬುದ್ದಿವಂತರೊಳಗೆ ದಡ್ಡ ತಾನಾಗಿ
ದಡ್ಡರೊಳಗೆ ತನ್ನ ದಡ್ಡತನವ ನೀಗಿ
ಏನೋ ಹೇಳಿ ಇನ್ನೇನನ್ನೋ ಮಾಡಿ
ಪುಸ್ತಕದ ಬದನೆಕಾಯಿ ಪಲ್ಯದಿ ಬಾಡಿ.

ಓದಿ ಕಡಿದು ಕಟ್ಟಿ ಹಾಕಿದ ಸಮಯವೇ
ಇತಿಹಾಸ ಮರುಕಳಿಸುತಲೇ ಇಲ್ಲವೇ
ಮೈ ಮುರಿದು ಕೆಲಸ ಮಾಡುವ ಬದಲು
ಪುಸ್ತಕದ ನೆಪ ಹಾಸಿಗೆಯ ಸಂಗ ಹಗಲು.

ಈ ಹೊತ್ತಿಗೆಯ ಪದರಗಳು ಮೇಲೆ ಕೆಳಗೆ
ಬೆಳಕು ಕಾಣುವುದು ಒಂದೊಂದೇ ಪುಟಗಳಿಗೆ
ಒಂದು ಪುಟ ಬೆಳಕಿಗಾದಂತೆ ನಂಟು
ಉಳಿದವಕ್ಕಂತೂ ಸದಾ ಕತ್ತಲ ಗಂಟು.

ಕುಕೂಊ.. said...

** ಜ್ಞಾನದ ಸುಳಿವು **

ಕತ್ತಲೆಯ ನಮ್ಮ ಬದುಕನ್ನು
ಜ್ಞಾನ ತಿರೆಗೊಯ್ಯವ
ಅದೋ ಅಲ್ಲಿ ಹೊನಲು ಚೆಲ್ಲಿದೆ
ಇದೋ ಇಲ್ಲಿ ಹೊತ್ತಿಗೆ ಸಾರದೊಂದಿಗೆ

ಬಾಳು ಅಜ್ಞಾನದ ಸೆಳವು
ಬಿಡಿಸಿಕೊಳ್ಳಲು ಬೇಕು ಜ್ಞಾನದ
ಸುಳಿವು, ಅನುಭವಗಳ ತೆವಳು
ಎದೆಗುಂದದೆ ಹುಡುಕುವ ಗೀಳು

ಹುಡುಕೋಣ ಜ್ಞಾನವನ್ನು
ಅನುಭಗಳನು ಅಡಗಿಸಿಕೊಂಡು
ಹೊತ್ತಿಗೆಯಲ್ಲೂ ಭಿತ್ತಿಗಳಲ್ಲೂ
ಬಿತ್ತಿ ಬೆಳೆಸೋಣ ಜ್ಞಾನ ಬುದ್ಧಿಯನ್ನು

ಬೆಳಕಿನ ಬಲದಿಂದ ಕತ್ತಲೆಯ ಕೇಡು
ಜ್ಞಾನದ ಬಲದಿಂದ ಅಜ್ಞಾನದ ಕೇಡು
ಮೌನದ ಬಲದಿಂದ ಜಂಜಾಟದ ಕೇಡು
ಪ್ರೀತಿಯ ಬಲದಿಂದ ದ್ವೇಷದ ಕೇಡು

** ಕುಕೂಊ...

Tina said...

ತಿರುಕ ಅವರಿಗೆ,
ನಿಮ್ಮ ಕನ್ನಡದ ಬಗೆಗಿನ ಕಾಳಜಿ ಕಂಡು ಬಲು ಸಂತೋಷವಾಯಿತು. ಆದರೆ ಕನ್ನಡ ದೊರಕಿದೆ, ಆಂಗ್ಲ ಬೇಡವೇ ಬೇಡ ಅನ್ನೋದಾದರೆ ನೀವು ಎಲ್ಲ ಬೆಂಗಳೂರಿಗರಿಗಾಗಿ ಹೊಸತೊಂದು ಚಳುವಳಿಯನ್ನೆ ಹುಟ್ಟುಹಾಕಬಹುದು ಅಲ್ಲವೆ? ಹಾಗಿಲ್ಲದೆ ನಿಮ್ಮ ಹೆಸರು ’ತಿರುಕ’ ಎಂದಿಲ್ಲದೆ ’Tiruka' ಎಂದೇಕಿದೆ?
ವ್ಯಂಗ್ಯ ಹಾಗಿರಲಿ, ಸೈಬರ್ ಕೆಫೆಯೊಂದರಿಂದ ಬರೆದ ಕಮೆಂಟು ಇದು. ಅಲ್ಲಿ ಯಾವುದೇ ತಂತ್ರಾಂಶಗಳನ್ನು ಆಮದು ಮಾಡಿಕೊಳ್ಳುವ ಸೌಲಭ್ಯವಿರದಿದ್ದಕ್ಕೆ ಆಂಗ್ಲದ ಬಳಕೆ. ಇದನ್ನೆಲ್ಲ ತಮ್ಮ ಪೂರ್ವಾಗ್ರಹಕ್ಕೆ ತಕ್ಕಂತೆ ಅರ್ಥೈಸಿಕೊಳ್ಳಬಾರದು.
- ಟೀನಾ