Wednesday 20 August, 2008

ಚಿತ್ರ ೬೬

I

ಚಿತ್ರ ೬೬ ಕ್ಕೆ ಸ್ಪಂದಿಸಿದವರು ತಿರುಕ, ಶ್ರೀಕಾಂತ ಮತ್ತು ಸತೀಶ್.

ತಿರುಕ ಅವರ ಕವನ -
ಅಂತರಾಳದ ಅನಿಸಿಕೆ


ನಾ ಬಿರಿದ ಹೂ
ನೀ ಹಸಿದ ದುಂಬಿ
ಎಮ್ಮದೆಲ್ಲಿಗೆಲ್ಲಿಯ ನಂಟು?
ನಮ್ಮಿಬ್ಬರಲಿರುವುದು ವೈರತ್ವವೋ?
ಸ್ನೇಹವೋ?
ಎನ್ನ ರಸವ ಹೀರುವುದು ನಿನ್ನ ಕರ್ಮ
ನಿನ್ನ ಪಾದ ಸ್ಪರ್ಶಕೆ ಹಾತೊರೆವುದು ನನ್ನ ಧರ್ಮ
ಜಗಕೆ ಬೇಕಿಹುದು
ನಾವಿಬ್ಬರು ಕೂಡಿಡುವ ಗಂಟು

ಕಷ್ಟಕಾಲಕೆ ಕೂಡಿಡುವುದು
ನಮ್ಮ ಧರ್ಮ
ಸುಲಭದಲಿ ಅದ ಕಳೆದುಕೊಳ್ಳುವುದೂ
ನಮ್ಮ ಕರ್ಮ
ಪ್ರತಿ ಸಲವೂ ನನ್ನ ನಿನ್ನ
ಸಮುದಾಯವ ಮೋಸಿಸುವರೇ
ಈ ಮಹಾಜನರು
ನಮ್ಮ ಕುಡಿಕೆಯು ಅವರದೇ ಆಸ್ತಿ
ಎಂದು ತಿಳಿದವರು

ಎನ್ನ ಮಕರಂದವೇ ನಿನಗೆ ಆಸರೆ
ನೀ ಮಾಡುವ ಪರಾಗ ಸಂಚಲನೆಗೇ ಎನ್ನ ಕಾತರ
ಎನ್ನ ಸಂತತಿಯ ಬೆಳವಣಿಗೆಯ ನಿನ್ನ ಧರ್ಮ
ಜಗಕೆ ಆಸರೆಯ ನೀಡುವುದೇ ನಮ್ಮೀರ್ವರ ಕರ್ಮ

ಕಾಣದ ದೇವನ ಮುಡಿಗೆ ಎನ್ನದೇ ಅಲಂಕಾರ
ಅಭಿಷೇಕಕೆ ನಿನ್ನದೇ ಮಧುವಿನ ಪರಿಕಾರ
ನಾವಿಬ್ಬರೂ ಕೂಡಿ ಸಾರಬಹುದೇ ಸಮರ
ಆಗಲಿ ಸರಿಯೇ ನಮ್ಮೀರ್ವರ ಹೆಸರು ಅಮರ

ಕೊಡು ನಿನ್ನ ಸಮ್ಮತಿ!
ಮಾಡುವೆ ಮಧುವ ವಿಷದ ಬಟ್ಟಲು
ಮೊನಚು ಕೊಂಡಿಯಿಂದ ಆತನಲಿ ಜಾರಲು
ಕಾಣುವನು ಹಂತಕನು ಕೊನೆ ಗತಿ


ಶ್ರೀಕಾಂತ ಅವರ ಕವನ -
ಜೇನುನೊಣದ ಕಲೆಯ ಕಲಿ!

ಜೇನುನೊಣವು ಸುಮದ ಮೇಲೆ
ಕುಳಿತಿಹುದನು ನೋಡು ಅಲ್ಲಿ!
ಜೇನುತುಪ್ಪದಾಸೆ ಬಿಟ್ಟು
ಜೇನುನೊಣದ ಕಲೆಯ ಕಲಿ!

ಸುಮದ ನಗುವು ನಂದದಂತೆ
ಜೋಪಾನದಿ ನೋಡಿಕೊಂಡು
ಮಕರಂದವ ಹೀರುತಿರುವ
ಜೇನುನೊಣದ ಕಲೆಯ ಕಲಿ!

ಹಲವು ಸುಮಗಳಿಂದ ತಾನು
ಮಕರಂದವ ಆಯ್ದು ತಂದು
ಜೇನುತುಪ್ಪ ಮಾಡ ಹೊರಟ
ಜೇನುನೊಣದ ಕಲೆಯ ಕಲಿ!

ಸುಮದಲಿಹುದು ಹಲವು ರುಚಿ;
ಬೇರೆ ರುಚಿಯ ಹೀರಿಕೊಳದೆ
ಸಿಹಿಯು ಮಾತ್ರ ಹೀರಿಕೊಳುವ
ಜೇನುನೊಣದ ಕಲೆಯ ಕಲಿ

ಸುಮದ, ನೊಣದ ಸೊಗಸು ಮಾತ್ರ
ಕಂಡು ತೃಪ್ತಿಯಾಗಬೇಡ!
ನರಗೆ ಪಾಠವಿಹುದಿಲ್ಲಿ!
ಜೇನುನೊಣದ ಕಲೆಯ ಕಲಿ!

ಜಗದ ಜನದಿ ಹಲವು ಗುಣ;
ಸಿಹಿಗುಣಗಳ ಮಾತ್ರ ಹೀರಿ
ಉಳಿದುದನು ತ್ಯಜಿಸೆಂಬ
ಜೇನುನೊಣದ ಕಲೆಯ ಕಲಿ!

ಹೀರಿಕೊಂಡ ಸಿಹಿಗುಣಗಳು
ಸೇರಿ ನಿನ್ನ ಗುಣವಾಗಲಿ
ಎಂದು ಪಾಠ ಹೇಳುತಿರುವ
ಜೇನುನೊಣದ ಕಲೆಯ ಕಲಿ!

ಯಾವ ಹಾನಿ ಮಾಡದಂತೆ
ಸುಗುಣಗಳನು ಸಂಪಾದಿಸು;
ನನ್ನ ನೋಡಿ ಕಲಿ ಎಂಬ
ಜೇನುನೊಣದ ಕಲೆಯ ಕಲಿ!

ಜೇನುತುಪ್ಪದಾಸೆ ಬಿಡು!
ಜೇನುನೊಣವು ನರಗೆ ಗುರು!
ಜೇನುನೊಣದ ಪಾಠ ಕೇಳಿ
ಜೇನುನೊಣದ ಕಲೆಯ ಕಲಿ!


ಸತೀಶ್ ಅವರ ಕವನ -
ಹೂವು-ದುಂಬಿ

ಒಂದೇ ಒಂದು ನೆಲೆಯಲ್ಲಿ ಇದ್ದು
ಒಂದೇ ದಳದಲ್ಲಿ ಒಟ್ಟೊಟ್ಟಿಗೆ ಎದ್ದು
ಬಣ್ಣಗಳ ಆಗರ ಹೂಗಳ ಪಾಲು.
ಅದೆಲ್ಲೋ ಬೀರಿ ಮತ್ತಿನ್ನೆಲ್ಲೋ ಹಾರಿ
ಹಲವು ಮಕರಂದವನು ಕುಟ್ಟಿ ಹೀರಿ
ಒಂದರ ನಂತರ ಬರುವ ದುಂಬಿ ಸಾಲು.

ಸಿಕ್ಕ ಬೆಳಕಿನ ಕ್ಷಣಗಳನು ಎಣಿಸುವ
ಚಿಕ್ಕ ಮೊಗ್ಗಾಗಿ ಹಿಗ್ಗಿ ಹಾತೊರೆಯುವ
ಒಂದೇ ಗಿಡದಲಿ ಕಂಗೊಳಿಸುವ ಹೂಗಳು.
ಒಂದೇ ರಾಣಿಯ ಮೊಟ್ಟೆಯ ಕೂಸು
ಅವಳು ಹೇಳಿದ್ದೇ ಇವರ ಆಜ್ಞೆಯ ಹಾಸು
ಸಾಮ್ರಾಜ್ಯವನು ಕೊಳ್ಳೆ ಹೊಡೆವ ದುಂಬಿಗಳು.

ಇಂದು ಇದ್ದು ನಾಳೆ ಇರದ ನಮ್ಮದೇ ತತ್ವ
ನಾವು ನಮ್ಮವರೊಳಗೆ ನಮ್ಮ ಅಂತಃಸತ್ವ
ಕೊರಗು-ಮರುಗು ಇರದೆ ಸದಾ ನಗುವ ಜೀವ.
ದಿನವು ಅಲ್ಲಲ್ಲಿ ಬಿದ್ದು ಅದೆಲ್ಲಿಂದಲೋ ಕದ್ದು
ಸಾವಿರ ಸರದಾರರು ಸದಾ ಸಿಹಿಯ ಮೆದ್ದು
ರೆಕ್ಕೆ ಬಡಿದಂತೆಲ್ಲಾ ಸದಾ ಕುರ್ರೆನ್ನುವ ಭಾವ.

ನಾವು ನಮ್ಮದೆಂಬ ಸೃಜನಶೀಲತೆ ದೊಡ್ಡದು
ಒಂದಿದ್ದು ನಾಳೆ ನೂರಾಗುವ ಬದುಕು ಸಣ್ಣದು
ಎಲ್ಲಿರಲಿ ಬಿಡಲಿ ನಮ್ಮತನವೆನ್ನುವುದು ಮುಖ್ಯ.
ಹತ್ತು ಹಲವು ಕಡೆ ಹಾರಿ ಹೀರುವ ಬಾಳು ಚೆನ್ನ
ಇದ್ದಷ್ಟು ದಿನ ಆದಷ್ಟು ಹೆಚ್ಚು ಕೂಡಿ ಕಳೆವ ಮುನ್ನ
ಹೂಂಕರಿಸಿ ನಮ್ಮತನವನು ತೋರುವ ಸಖ್ಯ.


3 comments:

Unknown said...

ಅಂತರಾಳದ ಅನಿಸಿಕೆ

ನಾ ಬಿರಿದ ಹೂ
ನೀ ಹಸಿದ ದುಂಬಿ
ಎಮ್ಮದೆಲ್ಲಿಗೆಲ್ಲಿಯ ನಂಟು?
ನಮ್ಮಿಬ್ಬರಲಿರುವುದು ವೈರತ್ವವೋ?
ಸ್ನೇಹವೋ?
ಎನ್ನ ರಸವ ಹೀರುವುದು ನಿನ್ನ ಕರ್ಮ
ನಿನ್ನ ಪಾದ ಸ್ಪರ್ಶಕೆ ಹಾತೊರೆವುದು ನನ್ನ ಧರ್ಮ
ಜಗಕೆ ಬೇಕಿಹುದು
ನಾವಿಬ್ಬರು ಕೂಡಿಡುವ ಗಂಟು

ಕಷ್ಟಕಾಲಕೆ ಕೂಡಿಡುವುದು
ನಮ್ಮ ಧರ್ಮ
ಸುಲಭದಲಿ ಅದ ಕಳೆದುಕೊಳ್ಳುವುದೂ
ನಮ್ಮ ಕರ್ಮ
ಪ್ರತಿ ಸಲವೂ ನನ್ನ ನಿನ್ನ
ಸಮುದಾಯವ ಮೋಸಿಸುವರೇ
ಈ ಮಹಾಜನರು
ನಮ್ಮ ಕುಡಿಕೆಯು ಅವರದೇ ಆಸ್ತಿ
ಎಂದು ತಿಳಿದವರು

ಎನ್ನ ಮಕರಂದವೇ ನಿನಗೆ ಆಸರೆ
ನೀ ಮಾಡುವ ಪರಾಗ ಸಂಚಲನೆಗೇ ಎನ್ನ ಕಾತರ
ಎನ್ನ ಸಂತತಿಯ ಬೆಳವಣಿಗೆಯ ನಿನ್ನ ಧರ್ಮ
ಜಗಕೆ ಆಸರೆಯ ನೀಡುವುದೇ ನಮ್ಮೀರ್ವರ ಕರ್ಮ

ಕಾಣದ ದೇವನ ಮುಡಿಗೆ ಎನ್ನದೇ ಅಲಂಕಾರ
ಅಭಿಷೇಕಕೆ ನಿನ್ನದೇ ಮಧುವಿನ ಪರಿಕಾರ
ನಾವಿಬ್ಬರೂ ಕೂಡಿ ಸಾರಬಹುದೇ ಸಮರ
ಆಗಲಿ ಸರಿಯೇ ನಮ್ಮೀರ್ವರ ಹೆಸರು ಅಮರ

ಕೊಡು ನಿನ್ನ ಸಮ್ಮತಿ!
ಮಾಡುವೆ ಮಧುವ ವಿಷದ ಬಟ್ಟಲು
ಮೊನಚು ಕೊಂಡಿಯಿಂದ ಆತನಲಿ ಜಾರಲು
ಕಾಣುವನು ಹಂತಕನು ಕೊನೆ ಗತಿ

Srikanth - ಶ್ರೀಕಾಂತ said...

ಜೇನುನೊಣದ ಕಲೆಯ ಕಲಿ!


ಜೇನುನೊಣವು ಸುಮದ ಮೇಲೆ
ಕುಳಿತಿಹುದನು ನೋಡು ಅಲ್ಲಿ!
ಜೇನುತುಪ್ಪದಾಸೆ ಬಿಟ್ಟು
ಜೇನುನೊಣದ ಕಲೆಯ ಕಲಿ!

ಸುಮದ ನಗುವು ನಂದದಂತೆ
ಜೋಪಾನದಿ ನೋಡಿಕೊಂಡು
ಮಕರಂದವ ಹೀರುತಿರುವ
ಜೇನುನೊಣದ ಕಲೆಯ ಕಲಿ!

ಹಲವು ಸುಮಗಳಿಂದ ತಾನು
ಮಕರಂದವ ಆಯ್ದು ತಂದು
ಜೇನುತುಪ್ಪ ಮಾಡ ಹೊರಟ
ಜೇನುನೊಣದ ಕಲೆಯ ಕಲಿ!

ಸುಮದಲಿಹುದು ಹಲವು ರುಚಿ;
ಬೇರೆ ರುಚಿಯ ಹೀರಿಕೊಳದೆ
ಸಿಹಿಯು ಮಾತ್ರ ಹೀರಿಕೊಳುವ
ಜೇನುನೊಣದ ಕಲೆಯ ಕಲಿ

ಸುಮದ, ನೊಣದ ಸೊಗಸು ಮಾತ್ರ
ಕಂಡು ತೃಪ್ತಿಯಾಗಬೇಡ!
ನರಗೆ ಪಾಠವಿಹುದಿಲ್ಲಿ!
ಜೇನುನೊಣದ ಕಲೆಯ ಕಲಿ!

ಜಗದ ಜನದಿ ಹಲವು ಗುಣ;
ಸಿಹಿಗುಣಗಳ ಮಾತ್ರ ಹೀರಿ
ಉಳಿದುದನು ತ್ಯಜಿಸೆಂಬ
ಜೇನುನೊಣದ ಕಲೆಯ ಕಲಿ!

ಹೀರಿಕೊಂಡ ಸಿಹಿಗುಣಗಳು
ಸೇರಿ ನಿನ್ನ ಗುಣವಾಗಲಿ
ಎಂದು ಪಾಠ ಹೇಳುತಿರುವ
ಜೇನುನೊಣದ ಕಲೆಯ ಕಲಿ!

ಯಾವ ಹಾನಿ ಮಾಡದಂತೆ
ಸುಗುಣಗಳನು ಸಂಪಾದಿಸು;
ನನ್ನ ನೋಡಿ ಕಲಿ ಎಂಬ
ಜೇನುನೊಣದ ಕಲೆಯ ಕಲಿ!

ಜೇನುತುಪ್ಪದಾಸೆ ಬಿಡು!
ಜೇನುನೊಣವು ನರಗೆ ಗುರು!
ಜೇನುನೊಣದ ಪಾಠ ಕೇಳಿ
ಜೇನುನೊಣದ ಕಲೆಯ ಕಲಿ!

Satish said...

ಹೂವು-ದುಂಬಿ

ಒಂದೇ ಒಂದು ನೆಲೆಯಲ್ಲಿ ಇದ್ದು
ಒಂದೇ ದಳದಲ್ಲಿ ಒಟ್ಟೊಟ್ಟಿಗೆ ಎದ್ದು
ಬಣ್ಣಗಳ ಆಗರ ಹೂಗಳ ಪಾಲು.
ಅದೆಲ್ಲೋ ಬೀರಿ ಮತ್ತಿನ್ನೆಲ್ಲೋ ಹಾರಿ
ಹಲವು ಮಕರಂದವನು ಕುಟ್ಟಿ ಹೀರಿ
ಒಂದರ ನಂತರ ಬರುವ ದುಂಬಿ ಸಾಲು.

ಸಿಕ್ಕ ಬೆಳಕಿನ ಕ್ಷಣಗಳನು ಎಣಿಸುವ
ಚಿಕ್ಕ ಮೊಗ್ಗಾಗಿ ಹಿಗ್ಗಿ ಹಾತೊರೆಯುವ
ಒಂದೇ ಗಿಡದಲಿ ಕಂಗೊಳಿಸುವ ಹೂಗಳು.
ಒಂದೇ ರಾಣಿಯ ಮೊಟ್ಟೆಯ ಕೂಸು
ಅವಳು ಹೇಳಿದ್ದೇ ಇವರ ಆಜ್ಞೆಯ ಹಾಸು
ಸಾಮ್ರಾಜ್ಯವನು ಕೊಳ್ಳೆ ಹೊಡೆವ ದುಂಬಿಗಳು.

ಇಂದು ಇದ್ದು ನಾಳೆ ಇರದ ನಮ್ಮದೇ ತತ್ವ
ನಾವು ನಮ್ಮವರೊಳಗೆ ನಮ್ಮ ಅಂತಃಸತ್ವ
ಕೊರಗು-ಮರುಗು ಇರದೆ ಸದಾ ನಗುವ ಜೀವ.
ದಿನವು ಅಲ್ಲಲ್ಲಿ ಬಿದ್ದು ಅದೆಲ್ಲಿಂದಲೋ ಕದ್ದು
ಸಾವಿರ ಸರದಾರರು ಸದಾ ಸಿಹಿಯ ಮೆದ್ದು
ರೆಕ್ಕೆ ಬಡಿದಂತೆಲ್ಲಾ ಸದಾ ಕುರ್ರೆನ್ನುವ ಭಾವ.

ನಾವು ನಮ್ಮದೆಂಬ ಸೃಜನಶೀಲತೆ ದೊಡ್ಡದು
ಒಂದಿದ್ದು ನಾಳೆ ನೂರಾಗುವ ಬದುಕು ಸಣ್ಣದು
ಎಲ್ಲಿರಲಿ ಬಿಡಲಿ ನಮ್ಮತನವೆನ್ನುವುದು ಮುಖ್ಯ.
ಹತ್ತು ಹಲವು ಕಡೆ ಹಾರಿ ಹೀರುವ ಬಾಳು ಚೆನ್ನ
ಇದ್ದಷ್ಟು ದಿನ ಆದಷ್ಟು ಹೆಚ್ಚು ಕೂಡಿ ಕಳೆವ ಮುನ್ನ
ಹೂಂಕರಿಸಿ ನಮ್ಮತನವನು ತೋರುವ ಸಖ್ಯ.