ಚಿತ್ರ ೭೧

ಚಿತ್ರ ೭೧ ಕ್ಕೆ ತವಿಶ್ರೀ ಮತ್ತು ಸತೀಶ್ ಅವರು ಬರೆದ ಕವನಗಳು ಹೀಗಿವೆ
ತವಿಶ್ರೀ ಅವರ ಕವನ -
ಸಿರಿ ನಾಡು
ಇತ್ತ ನೋಡು ಕಲ್ಪವೃಕ್ಷಗಳ ನಾಡು
ಸುತ್ತಲೂ ಹರಡುತಿದೆ ರವಿಯ ತಂಪಿನ ಜಾಡು
ಕಂಗೊಳಿಸುತಿಹುದು ಲಲಿತ ಕಲೆಗಳ ಬೀಡು
ಜಾನುವಾರು ಹಕ್ಕಿಗಳು ಸೇರುತಿವೆ ಗೂಡು
ಯಾರೆಂದರು - ಸಾಯುತಿಹುದು ಈ ನಾಡು
ಬೆಳಗಿ ಜಗಮಗಿಸುತಿಹುದು ಕಗ್ಗತ್ತಲೆಯ ಕಾಡು
ಬೆಳಕ ಮೂಡಿಸಿದುದು, ರವಿ ಮೀರಿಸಿದ ಕವಿ
ಬೆಳಕಿನ ಜಾಡ ಹುಡುಕು ಹೊರಟಿಹನು ರವಿ
ಎಂದಿನಂತೆ ಬೈಗಿನಲಿ ಕಣ್ಬಿಟ್ಟನು ನಮ್ಮ ರವಿ
ಸುತ್ತಲೂ ಕತ್ತಲಿನ ಬದಲು ಕಂಗೊಳಿಸುವ ಸವಿ
ಮೂಗಿಗೆ ಬಡಿಯುತಿಹುದು ಶ್ರೀಗಂಧದ ಹವೆ
ಭೂತಾಯಿಯ ಮಡಿಲಿನಿಂದ ಹೊರಹೊಮ್ಮುತಿಹುದು ಹಬೆ
ಹಸಿದು ಬಳಲಿದವಗೆ ತಂಪೆರೆಯುವ ಬೊಂಡ
ಉಡುಗುತಿಹ ಶಕ್ತಿಗೆ ಚೈತನ್ಯ ತುಂಬುವ ಹಯನು
ಜಗವ ಸಾಗಿಸುತಿಹ ಚಕ್ರದ ಚಕ್ಕದ ಬಂಡಿ
ಯಾರೂ ಕಂಡಿರದ ಹೊನ್ನಿನ ಗಿಂಡಿ
ನಗರಗಳ ಜಂಜಾಟದ ಸೋಂಕಿರದ
ಹಳ್ಳಿನಾಡಿದು ನಾಗರೀಕತೆಯ ಬುನಾದಿ
ಯಾವುದಿದೀ ವಿಪರೀತದ ಶಕ್ತಿ?
ಪಂಚಭೂತಗಳಿಗೂ ಸಡ್ಡೊಡೆಯುವ ಯುಕ್ತಿ
ಸಿರಿಯ ಮಡಿಲಲಿ ತುಂಬಿ ತುಳುಕಿಸಿಹ ಕನ್ನಡಮ್ಮ
ಅಹರ್ನಿಶಿ ಇರಲಿ ಇವಳ ಮೇಲೆ ನಮ್ಮೆಲ್ಲರ ಭಕ್ತಿ
ಸತೀಶ್ ಅವರ ಕವನ -
ಎಲ್ಲೂ ನಿಲ್ಲದ ನಡೆ
ಕಗ್ಗತ್ತಲು ಕಾಡುವಾಗ ನೆಲೆಸಿತ್ತು ಶಾಂತಿ
ಬಾನ ರವಿ ಬಂದ ಕ್ಷೋಭೆಗಳ ತಂದ
ಭುವಿಯನ್ನು ಬೆಳಗಿ ಓಟದಲಿ ಪಳಗಿ
ಮತ್ತೆ ಕತ್ತಲಾಗುತ್ತಿದ್ದಂತೆ ನಾಚಿ ನೀರಾಗಿ
ತನ್ನ ಆವರಣದಲಿ ಓಕುಳಿ ಚೆಲ್ಲಿ
ಎಲ್ಲಾ ಕಡೆಗೂ ಕಿರಣಗಳು ಚೆಲ್ಲಾಪಿಲ್ಲಿ
ಹರಡುವಂತೆ ಮಾಡಿ ದಿನನಿತ್ಯದ ಮೋಡಿ
ಕತ್ತಲನು ಸುತ್ತ ಹರವಿ ಮತ್ತೆಲ್ಲೋ ಓಡುತಿಹನು ರವಿ.
ಇವನ್ನೆಲ್ಲಾ ನೋಡಿಯೂ ನೋಡದೆಯೇ
ತಲೆತೂಗುವ ತೆಂಗುಗಳ ತಪ್ಪೇನು
ಮುಗಿಲಿನೆಡೆಗೆ ಚಿಮ್ಮುವ ಮರದುತ್ಸಾಹಕೆ
ಅಡ್ಡ ಬೀಸುವ ಗಾಳಿ-ಕಿರಣಗಳ ಒಪ್ಪೇನು.
ಇಲ್ಲಿ ಸತ್ತು ಮತ್ತಿನ್ನೆಲ್ಲೋ ಹುಟ್ಟುವ ಸೂರ್ಯ
ದಿನ ಸಾಯುವವರಿಗೆ ಅಳುವ ಕಾರ್ಯ
ಜೋಪಡಿಯಲ್ಲಿ ಜೊಂಪಿನಲಿ ಮಲಗಿ
ಆಸೆ ಕಂಡಂತೆ ಸುಖನಿದ್ರೆಯಲಿ ಮುಲುಗಿ
ಕಂಡೂ ಕೈಗೆ ಸಿಗದ ಕನಸುಗಳ ನಂಬಿ
ಕಿರಣಗಳು ಹಾಯಿ ದೋಣಿಯ ತುಂಬಿ
ಒಂದು ಎಡೆಯಿಂದ ಮತ್ತೊಂದು ಕಡೆಗೆ
ಎಂದೋ ಹೊರಟ ಎಲ್ಲೂ ನಿಲ್ಲದ ನಡೆಗೆ.
ತವಿಶ್ರೀ ಅವರ ಕವನ -
ಸಿರಿ ನಾಡು
ಇತ್ತ ನೋಡು ಕಲ್ಪವೃಕ್ಷಗಳ ನಾಡು
ಸುತ್ತಲೂ ಹರಡುತಿದೆ ರವಿಯ ತಂಪಿನ ಜಾಡು
ಕಂಗೊಳಿಸುತಿಹುದು ಲಲಿತ ಕಲೆಗಳ ಬೀಡು
ಜಾನುವಾರು ಹಕ್ಕಿಗಳು ಸೇರುತಿವೆ ಗೂಡು
ಯಾರೆಂದರು - ಸಾಯುತಿಹುದು ಈ ನಾಡು
ಬೆಳಗಿ ಜಗಮಗಿಸುತಿಹುದು ಕಗ್ಗತ್ತಲೆಯ ಕಾಡು
ಬೆಳಕ ಮೂಡಿಸಿದುದು, ರವಿ ಮೀರಿಸಿದ ಕವಿ
ಬೆಳಕಿನ ಜಾಡ ಹುಡುಕು ಹೊರಟಿಹನು ರವಿ
ಎಂದಿನಂತೆ ಬೈಗಿನಲಿ ಕಣ್ಬಿಟ್ಟನು ನಮ್ಮ ರವಿ
ಸುತ್ತಲೂ ಕತ್ತಲಿನ ಬದಲು ಕಂಗೊಳಿಸುವ ಸವಿ
ಮೂಗಿಗೆ ಬಡಿಯುತಿಹುದು ಶ್ರೀಗಂಧದ ಹವೆ
ಭೂತಾಯಿಯ ಮಡಿಲಿನಿಂದ ಹೊರಹೊಮ್ಮುತಿಹುದು ಹಬೆ
ಹಸಿದು ಬಳಲಿದವಗೆ ತಂಪೆರೆಯುವ ಬೊಂಡ
ಉಡುಗುತಿಹ ಶಕ್ತಿಗೆ ಚೈತನ್ಯ ತುಂಬುವ ಹಯನು
ಜಗವ ಸಾಗಿಸುತಿಹ ಚಕ್ರದ ಚಕ್ಕದ ಬಂಡಿ
ಯಾರೂ ಕಂಡಿರದ ಹೊನ್ನಿನ ಗಿಂಡಿ
ನಗರಗಳ ಜಂಜಾಟದ ಸೋಂಕಿರದ
ಹಳ್ಳಿನಾಡಿದು ನಾಗರೀಕತೆಯ ಬುನಾದಿ
ಯಾವುದಿದೀ ವಿಪರೀತದ ಶಕ್ತಿ?
ಪಂಚಭೂತಗಳಿಗೂ ಸಡ್ಡೊಡೆಯುವ ಯುಕ್ತಿ
ಸಿರಿಯ ಮಡಿಲಲಿ ತುಂಬಿ ತುಳುಕಿಸಿಹ ಕನ್ನಡಮ್ಮ
ಅಹರ್ನಿಶಿ ಇರಲಿ ಇವಳ ಮೇಲೆ ನಮ್ಮೆಲ್ಲರ ಭಕ್ತಿ
ಸತೀಶ್ ಅವರ ಕವನ -
ಎಲ್ಲೂ ನಿಲ್ಲದ ನಡೆ
ಕಗ್ಗತ್ತಲು ಕಾಡುವಾಗ ನೆಲೆಸಿತ್ತು ಶಾಂತಿ
ಬಾನ ರವಿ ಬಂದ ಕ್ಷೋಭೆಗಳ ತಂದ
ಭುವಿಯನ್ನು ಬೆಳಗಿ ಓಟದಲಿ ಪಳಗಿ
ಮತ್ತೆ ಕತ್ತಲಾಗುತ್ತಿದ್ದಂತೆ ನಾಚಿ ನೀರಾಗಿ
ತನ್ನ ಆವರಣದಲಿ ಓಕುಳಿ ಚೆಲ್ಲಿ
ಎಲ್ಲಾ ಕಡೆಗೂ ಕಿರಣಗಳು ಚೆಲ್ಲಾಪಿಲ್ಲಿ
ಹರಡುವಂತೆ ಮಾಡಿ ದಿನನಿತ್ಯದ ಮೋಡಿ
ಕತ್ತಲನು ಸುತ್ತ ಹರವಿ ಮತ್ತೆಲ್ಲೋ ಓಡುತಿಹನು ರವಿ.
ಇವನ್ನೆಲ್ಲಾ ನೋಡಿಯೂ ನೋಡದೆಯೇ
ತಲೆತೂಗುವ ತೆಂಗುಗಳ ತಪ್ಪೇನು
ಮುಗಿಲಿನೆಡೆಗೆ ಚಿಮ್ಮುವ ಮರದುತ್ಸಾಹಕೆ
ಅಡ್ಡ ಬೀಸುವ ಗಾಳಿ-ಕಿರಣಗಳ ಒಪ್ಪೇನು.
ಇಲ್ಲಿ ಸತ್ತು ಮತ್ತಿನ್ನೆಲ್ಲೋ ಹುಟ್ಟುವ ಸೂರ್ಯ
ದಿನ ಸಾಯುವವರಿಗೆ ಅಳುವ ಕಾರ್ಯ
ಜೋಪಡಿಯಲ್ಲಿ ಜೊಂಪಿನಲಿ ಮಲಗಿ
ಆಸೆ ಕಂಡಂತೆ ಸುಖನಿದ್ರೆಯಲಿ ಮುಲುಗಿ
ಕಂಡೂ ಕೈಗೆ ಸಿಗದ ಕನಸುಗಳ ನಂಬಿ
ಕಿರಣಗಳು ಹಾಯಿ ದೋಣಿಯ ತುಂಬಿ
ಒಂದು ಎಡೆಯಿಂದ ಮತ್ತೊಂದು ಕಡೆಗೆ
ಎಂದೋ ಹೊರಟ ಎಲ್ಲೂ ನಿಲ್ಲದ ನಡೆಗೆ.