Tuesday 2 September, 2008

ಚಿತ್ರ ೬೮



ಚಿತ್ರ ೬೮ ಕ್ಕೆ ತ್ರಿವೇಣಿ,ತಿರುಕ ಮತ್ತು ಸತೀಶ್ ಅವರು ಬರೆದ ಕವನಗಳು ಹೀಗಿವೆ

ತ್ರಿವೇಣಿ ಅವರ ಕವನ -
ಕಾಲದ
ಗಂಟೆ


ತುಂಬಿದ ಶಾಂತಿಯ ಕೆಣಕುವ ಹಾಗೆ
ಮನಸನು ತಲ್ಲಣ ಗೊಳಿಸುವ ಹಾಗೆ
ಎಲ್ಲಿಂದಲೇ ತೂರಿ ಬಂದಿತು ಶಬ್ದ
ಕಲಕೇ ಹೋಯಿತು ದಿವ್ಯ ನಿಶ್ಯಬ್ದ !

ಅಂತರಾಳದ ಆಳಕ್ಕಿಳಿದು
ಮೊಳಗುತ್ತಲಿದೆ ಕಾಲದ ಕೂಗು
ಹನಿಹನಿ ಆಯುವು ಸೋರುವ ಮುನ್ನ
ಜನ್ಮ ಸಾರ್ಥಕಗೊಳಿಸಿಕೊ ಚಿನ್ನ !

ಆಯಿತೇ ಮಗನಿಗೆ ವಿದ್ಯಾಭ್ಯಾಸ ?
ಆದೀತು ಮಗಳ ಮದುವೆಯೂ ನಿರಾಯಾಸ
ತೀರಿತು ತಾನೇ ಮಾಡಿದ ಸಾಲ ?
ಬರಿ ಕನವರಿಕೆಯಲಿ ಕಳೆಯಿತೇ ಕಾಲ ?

ಆಗಿತ್ತೇ ನಿನ್ನಿಂದ ಅನ್ಯರಿಗುಪಕಾರ ?
ಆಗಿರಲಿಲ್ಲ ತಾನೇ ನೀನಾರಿಗೂ ಮಣಭಾರ ?
ನಿನ್ನ ಬಾಳಿಗೂ ಒಂದು ಅರ್ಥವಿತ್ತೇ ?
ಇಲ್ಲ, ಬರೀ ಕುಯುಕ್ತಿಯಲಿ ವ್ಯರ್ಥವಾಯ್ತೇ?

ಅರೆಬರೆದಿಟ್ಟ ಗ್ರಂಥ ಏನಾಯ್ತು ?
ಆಪ್ತ-ಮಿತ್ರರ ಭೇಟಿ ಎಂದಾಯ್ತು ?
ಪ್ರಪಂಚ ಪರ್ಯಟನ, ಕಾಶಿ ಯಾತ್ರೆ ?
ಮುಗಿಸಿರಿ ಬೇಗ ; ಮುಗಿಯಲಿದೆ ಜಾತ್ರೆ !

ಗಣಗಣ ಬಡಿದಿದೆ ಕಾಲದ ಗಂಟೆ
ಅದಕೆದುರಾಡುವ ಧೀರರು ಉಂಟೇ?
ಬಂದ ದಾರಿಯಲ್ಲಿ ಇರಲಿ ಹೆಜ್ಜೆ ಗುರುತು
ಒಯ್ಯುವುದೇನಿಲ್ಲ ಸುಕೃತಗಳ ಹೊರೆ ಹೊರತು!

- ತ್ರಿವೇಣಿ


ತಿರುಕ ಅವರ ಕವನ -
ಒಂದು ಗಂಟೆಯ ಕಥೆ


ಕಾಲದ ಪರಿವೆ ಇಲ್ಲದೇ ಮಲಗಿದವರ
ಬಡಿದೆಬ್ಬಿಸುವ ಗಂಟೆ
ತಾನೇ ಮಲಗಿದೆಯೇ?
ಕಾಲವೊಂದಿತ್ತು - ಊರಿಗೊಂದೇ ಗಂಟೆ
ಕೋಟೆ ಬಾಗಿಲಲಿ ಜೊತೆ ಇರುತ್ತಿತ್ತೊಂದು ಹೆಂಟೆ
ಬೋರಜ್ಜಿಯ ಕನಸಿನೊಂದಿಗೆ
ಮರೆಯಾಯಿತು ಆ ಹೆಂಟೆ
ಒಬ್ಬಂಟಿಗನಾಗಿ ಬಿಟ್ಟು ಹೋಗಿತ್ತು

ಮಾದೇಶನ ಮಾಲೀಶು ತಾಲೀಮಿನೊಂದಿಗೆ
ನಡೆದಿತ್ತು ನನ್ನ ಕೈಂಕರ್ಯ
ಅಲಾರಮ್ಮು ಪಟಾಲಮ್ಮುಗಳ ಹಾವಳಿ
ಎಲ್ಲರ ಕೈಗಳಲ್ಲಿ ಬಗೆ ಬಗೆಯ ಗಡಿಯಾರದ ಸರಪಳಿ
ಮಾದೇಶನಿಗೆ ವಯೋಧರ್ಮದ ಬವಳಿ
ಪಿಂಚಣಿ ಇಲ್ಲದ ನಿವೃತ್ತೊ ನನಗೆ ಬಂದ ಬಳುವಳಿ

ಮಾಲಿಕನಿಲ್ಲದೇ ಕಿಲುಬುಗಟ್ಟುತ್ತಿದೆ
ಕೇಳುವವರಿಲ್ಲವೆಂದು ಹಲುಬುತ್ತಿದೆ
ಒಂದು ಕಾಲಕೆ ಗಟ್ಟಿಯಾಗಿ ಹೊಸೆದಿದ್ದ
ಮಜಬೂತವಾಗಿದ್ದ ಹಗ್ಗ
ಉಸಿರಿಲ್ಲದ ಪುಗ್ಗದಂತೆ ಸುರುಟಿಹೋಗುತ್ತಿದೆ
ಎಳೆ ಮಗುವೂ ಕತ್ತರಿಸಬಹುದಂತಾಗುತ್ತಿದೆ

ಎನಗೀಗ ಉಳಿಗಾಲವಿಲ್ಲ
ಕಾಲಕಸಕ್ಕಿಂತ ಕಡೆಯಾಗಿಹೆನಲ್ಲ
ಎನ್ನತ್ತ ಒಂದು ದೃಷ್ಟಿಯೂ ಮೂಡುತ್ತಿಲ್ಲವಲ್ಲ

ಅಗ್ನಿಶಾಮಕ ದಳದಲಿ
ನನಗೂ ಉಂಟು ಭಾಗ
ದೇಗುಲ ಇಗರ್ಜಿ ಮಂದಿರಗಳಲ್ಲಿ
ದಾಸಯ್ಯನ ಜೋಳಿಗೆಯ ಬದಿಯಲ್ಲಿ
ಭಾಗಮ್ಮನ (ಹಸು) ಕೊರಳಿನಲ್ಲಿ
ವಿರಾಜಿಸುತಿಹೆ
ಅಲ್ಲೆಂದು ಬರುವುದೋ ಎನಗೆ
ಕೊನೆಗಾಲ!
ಸವಕಳಿಸುತ್ತಿಹ ನನಗೆಂದು
ದೊರೆವುದು ವಿಶ್ರಾಂತ ಜೀವನ
ಪಿಂಚಣಿ
ಮುಂದೊಮ್ಮೆ ನಾನೂ
ದರ್ಜಿಸುವೆ ಎನ್ನ ಪಳೆಯುಳಿಕೆ.


ಸತೀಶ್ ಅವರ ಕವನ -
ಸದ್ದು ಮಾಡದ ಘಂಟೆ


ಸುಮ್ಮನಿರುವವರು ಮಾಡುವರೆ ಸದ್ದು
ಚಲಿಸುವಿಕೆಗೇ ತಗುಲಿಕೊಂಡಿಹ ಮದ್ದು

ಗುಡಿ ಇಲ್ಲದ ಘಂಟೆ ಪಡೆ ಇಲ್ಲದ ಸೈನ್ಯ
ಹಳೆಯದನು ಈವರೆಗೆ ನೆಚ್ಚಿಕೊಂಡಿಹ ದೈನ್ಯ

ಸೆಣಬು ನಾರು ಹತ್ತಿ ಎಳೆಗಳಿಗೆ ಜೋತುಕೊಂಡು
ಹೊಸ ಸೂರು ತಲೆಮಾರುಗಳಿಗೆ ಆತುಕೊಂಡು

ದೂರದವರೆಗೆ ಪಸರಿಸುವ ಗಾಳಿ ಬದಲಾಯ್ತೆ
ಗಳಘಂಟೆಯೊಳಗಿನ ಲೋಹ ಸರಿಹೋಯ್ತೆ

ಹಿಂದಿನದಕು ಇಂದಿನದಕು ತಳುಕಿಕೊಂಡಂತೆ
ಹಳೆ ನಾದವನು ಆಲಿಸುವ ಕಿವಿಗಳು ಬದಲಂತೆ

ನಿಂತಲ್ಲೇ ನಿಂತವುಗಳಿಗೆ ಸ್ಪಂದಿಸುವ ಹಕ್ಕಿಲ್ಲ
ಬೇಕು ಬೇಕೆಂದಲ್ಲಿ ಓಡುವವುಗಳಿಗೆ ದಿಕ್ಕಿಲ್ಲ

ಇಂದಿನ ಸೂರ್ಯನು ಮರೆಯಾಗುವ ಮುನ್ನ
ಹಲವನ್ನು ಬೆಸೆವ ಇಂದನ್ನು ನೋಡುವುದು ಚೆನ್ನ.

3 comments:

sritri said...

ಕಾಲದ ಗಂಟೆ


ತುಂಬಿದ ಶಾಂತಿಯ ಕೆಣಕುವ ಹಾಗೆ
ಮನಸನು ತಲ್ಲಣ ಗೊಳಿಸುವ ಹಾಗೆ
ಎಲ್ಲಿಂದಲೇ ತೂರಿ ಬಂದಿತು ಶಬ್ದ
ಕಲಕೇ ಹೋಯಿತು ದಿವ್ಯ ನಿಶ್ಯಬ್ದ !

ಅಂತರಾಳದ ಆಳಕ್ಕಿಳಿದು
ಮೊಳಗುತ್ತಲಿದೆ ಕಾಲದ ಕೂಗು
ಹನಿಹನಿ ಆಯುವು ಸೋರುವ ಮುನ್ನ
ಜನ್ಮ ಸಾರ್ಥಕಗೊಳಿಸಿಕೊ ಚಿನ್ನ !

ಆಯಿತೇ ಮಗನಿಗೆ ವಿದ್ಯಾಭ್ಯಾಸ ?
ಆದೀತು ಮಗಳ ಮದುವೆಯೂ ನಿರಾಯಾಸ
ತೀರಿತು ತಾನೇ ಮಾಡಿದ ಸಾಲ ?
ಬರಿ ಕನವರಿಕೆಯಲಿ ಕಳೆಯಿತೇ ಕಾಲ ?

ಆಗಿತ್ತೇ ನಿನ್ನಿಂದ ಅನ್ಯರಿಗುಪಕಾರ ?
ಆಗಿರಲಿಲ್ಲ ತಾನೇ ನೀನಾರಿಗೂ ಮಣಭಾರ ?
ನಿನ್ನ ಬಾಳಿಗೂ ಒಂದು ಅರ್ಥವಿತ್ತೇ ?
ಇಲ್ಲ, ಬರೀ ಕುಯುಕ್ತಿಯಲಿ ವ್ಯರ್ಥವಾಯ್ತೇ?

ಅರೆಬರೆದಿಟ್ಟ ಗ್ರಂಥ ಏನಾಯ್ತು ?
ಆಪ್ತ-ಮಿತ್ರರ ಭೇಟಿ ಎಂದಾಯ್ತು ?
ಪ್ರಪಂಚ ಪರ್ಯಟನ, ಕಾಶಿ ಯಾತ್ರೆ ?
ಮುಗಿಸಿರಿ ಬೇಗ ; ಮುಗಿಯಲಿದೆ ಜಾತ್ರೆ !

ಗಣಗಣ ಬಡಿದಿದೆ ಕಾಲದ ಗಂಟೆ
ಅದಕೆದುರಾಡುವ ಧೀರರು ಉಂಟೇ?
ಬಂದ ದಾರಿಯಲ್ಲಿ ಇರಲಿ ಹೆಜ್ಜೆ ಗುರುತು
ಒಯ್ಯುವುದೇನಿಲ್ಲ ಸುಕೃತಗಳ ಹೊರೆ ಹೊರತು!

- ತ್ರಿವೇಣಿ

Unknown said...

ಒಂದು ಗಂಟೆಯ ಕಥೆ

ಕಾಲದ ಪರಿವೆ ಇಲ್ಲದೇ ಮಲಗಿದವರ
ಬಡಿದೆಬ್ಬಿಸುವ ಗಂಟೆ
ತಾನೇ ಮಲಗಿದೆಯೇ?
ಕಾಲವೊಂದಿತ್ತು - ಊರಿಗೊಂದೇ ಗಂಟೆ
ಕೋಟೆ ಬಾಗಿಲಲಿ ಜೊತೆ ಇರುತ್ತಿತ್ತೊಂದು ಹೆಂಟೆ
ಬೋರಜ್ಜಿಯ ಕನಸಿನೊಂದಿಗೆ
ಮರೆಯಾಯಿತು ಆ ಹೆಂಟೆ
ಒಬ್ಬಂಟಿಗನಾಗಿ ಬಿಟ್ಟು ಹೋಗಿತ್ತು

ಮಾದೇಶನ ಮಾಲೀಶು ತಾಲೀಮಿನೊಂದಿಗೆ
ನಡೆದಿತ್ತು ನನ್ನ ಕೈಂಕರ್ಯ
ಅಲಾರಮ್ಮು ಪಟಾಲಮ್ಮುಗಳ ಹಾವಳಿ
ಎಲ್ಲರ ಕೈಗಳಲ್ಲಿ ಬಗೆ ಬಗೆಯ ಗಡಿಯಾರದ ಸರಪಳಿ
ಮಾದೇಶನಿಗೆ ವಯೋಧರ್ಮದ ಬವಳಿ
ಪಿಂಚಣಿ ಇಲ್ಲದ ನಿವೃತ್ತೊ ನನಗೆ ಬಂದ ಬಳುವಳಿ

ಮಾಲಿಕನಿಲ್ಲದೇ ಕಿಲುಬುಗಟ್ಟುತ್ತಿದೆ
ಕೇಳುವವರಿಲ್ಲವೆಂದು ಹಲುಬುತ್ತಿದೆ
ಒಂದು ಕಾಲಕೆ ಗಟ್ಟಿಯಾಗಿ ಹೊಸೆದಿದ್ದ
ಮಜಬೂತವಾಗಿದ್ದ ಹಗ್ಗ
ಉಸಿರಿಲ್ಲದ ಪುಗ್ಗದಂತೆ ಸುರುಟಿಹೋಗುತ್ತಿದೆ
ಎಳೆ ಮಗುವೂ ಕತ್ತರಿಸಬಹುದಂತಾಗುತ್ತಿದೆ

ಎನಗೀಗ ಉಳಿಗಾಲವಿಲ್ಲ
ಕಾಲಕಸಕ್ಕಿಂತ ಕಡೆಯಾಗಿಹೆನಲ್ಲ
ಎನ್ನತ್ತ ಒಂದು ದೃಷ್ಟಿಯೂ ಮೂಡುತ್ತಿಲ್ಲವಲ್ಲ

ಅಗ್ನಿಶಾಮಕ ದಳದಲಿ
ನನಗೂ ಉಂಟು ಭಾಗ
ದೇಗುಲ ಇಗರ್ಜಿ ಮಂದಿರಗಳಲ್ಲಿ
ದಾಸಯ್ಯನ ಜೋಳಿಗೆಯ ಬದಿಯಲ್ಲಿ
ಭಾಗಮ್ಮನ (ಹಸು) ಕೊರಳಿನಲ್ಲಿ
ವಿರಾಜಿಸುತಿಹೆ
ಅಲ್ಲೆಂದು ಬರುವುದೋ ಎನಗೆ
ಕೊನೆಗಾಲ!
ಸವಕಳಿಸುತ್ತಿಹ ನನಗೆಂದು
ದೊರೆವುದು ವಿಶ್ರಾಂತ ಜೀವನ
ಪಿಂಚಣಿ
ಮುಂದೊಮ್ಮೆ ನಾನೂ
ದರ್ಜಿಸುವೆ ಎನ್ನ ಪಳೆಯುಳಿಕೆ

Satish said...

ಸದ್ದು ಮಾಡದ ಘಂಟೆ

ಸುಮ್ಮನಿರುವವರು ಮಾಡುವರೆ ಸದ್ದು
ಚಲಿಸುವಿಕೆಗೇ ತಗುಲಿಕೊಂಡಿಹ ಮದ್ದು

ಗುಡಿ ಇಲ್ಲದ ಘಂಟೆ ಪಡೆ ಇಲ್ಲದ ಸೈನ್ಯ
ಹಳೆಯದನು ಈವರೆಗೆ ನೆಚ್ಚಿಕೊಂಡಿಹ ದೈನ್ಯ

ಸೆಣಬು ನಾರು ಹತ್ತಿ ಎಳೆಗಳಿಗೆ ಜೋತುಕೊಂಡು
ಹೊಸ ಸೂರು ತಲೆಮಾರುಗಳಿಗೆ ಆತುಕೊಂಡು

ದೂರದವರೆಗೆ ಪಸರಿಸುವ ಗಾಳಿ ಬದಲಾಯ್ತೆ
ಗಳಘಂಟೆಯೊಳಗಿನ ಲೋಹ ಸರಿಹೋಯ್ತೆ

ಹಿಂದಿನದಕು ಇಂದಿನದಕು ತಳುಕಿಕೊಂಡಂತೆ
ಹಳೆ ನಾದವನು ಆಲಿಸುವ ಕಿವಿಗಳು ಬದಲಂತೆ

ನಿಂತಲ್ಲೇ ನಿಂತವುಗಳಿಗೆ ಸ್ಪಂದಿಸುವ ಹಕ್ಕಿಲ್ಲ
ಬೇಕು ಬೇಕೆಂದಲ್ಲಿ ಓಡುವವುಗಳಿಗೆ ದಿಕ್ಕಿಲ್ಲ

ಇಂದಿನ ಸೂರ್ಯನು ಮರೆಯಾಗುವ ಮುನ್ನ
ಹಲವನ್ನು ಬೆಸೆವ ಇಂದನ್ನು ನೋಡುವುದು ಚೆನ್ನ.