Tuesday 9 September, 2008

ಚಿತ್ರ ೬೯



ಚಿತ್ರ ೬೯ ಕ್ಕೆ ತವಿಶ್ರೀ, ಸತೀಶ್ ಮತ್ತು ಕುಮಾರ ಸ್ವಾಮಿ ಕಡಾಕೊಳ್ಳ ಅವರು ಬರೆದ ಕವನಗಳು ಹೀಗಿವೆ

ತವಿಶ್ರೀ ಅವರ ಕವನ -
ದೇವನ ಕನ್ನಡಿ


ಹೋಗುತಿಹೆ ನೀ ಎತ್ತ
ನಿನಗೆ ನಾ ಹಾದಿ ತೋರಿಸಿದತ್ತ
ಅದೋ ಹೊರಡು ದಿಗಂತದತ್ತ
ನಾನಿಲ್ಲದೇ ನೀನಿಲ್ಲ
ಒಬ್ಬಂಟಿಯೆಂಬ ಹೆದರಿಕೆ ಸಲ್ಲ

ನಿನ್ನ ಮೈಮೇಲೆ ಹರಿದಾಡುವವರಿನ್ನೆಷ್ಟು?
ಎಲ್ಲರ ಭಾರವ ತಡೆಯಬಲ್ಲೆಯೇನು?
ಒಳಿತಲ್ಲವೀ ನಿನಗೀ ಅಹಂಕಾರ
ನೀ ಆಗಿರುವೆ ಪರಾವಲಂಬಿ
ಈ ಭುವಿಯ ಮೇಲೆ

ನೋಡತ್ತ ಸುಂದರ ಕಾನನ ಸಿರಿ
ಇಂದಿಹುದು ನಾಳೆ ಇರುವುದಾ?
ಬಾ ಇಂದೇ ನಿನಗೆ ಅದರ ರುಚಿ ಉಣಿಸುವೆ
ನಾಳೆ ಮೆಲುಕಾದರೂ ಹಾಕುವಿಯಂತೆ
ಇಂದು ಉಣದಿದ್ದರೆ ನಾಳೆಗಿನ್ನೆಲ್ಲಿಯ ಮೆಲುಕು
ಸಮುದ್ರ ತೀರದಲಿ ಹೆಜ್ಜೆ ಛಾಪಿಸಿದ ಉಸುಕು

ಹೊಕ್ಕುವೆ ಸುರಂಗದಲಿ
ನಿನ್ನ ನಂಬಿದವರಿಗೆ ಹಾದಿ ತೋರುವೆ
ಕಾಲಿಡದ ಕಾನನದಲಿ
ಹೊರತರುವೆ ಕತ್ತಲಲಿ
ಕಣ್ಣಿದ್ದರೂ ಕಾಣದವಗೆ ಬೆಳಕ ತೋರಿಸುವೆ

ತೋರು ನೀ ನಿಸರ್ಗ ದೇವಿಯ ಸಿರಿ
ಜನ ಕಾಣದ ದೇವನ ಪರಿ
ನಿನಗಿಲ್ಲವೇ
ಜೀವ
ಹೀಗಳೆಯುವ ಭಾವ
ಎಲ್ಲವನೂ ಸಹಿಸಿ
ಓಡುವೆ, ಓಡುತಲಿರುವೆ
ಒಂದೆಡೆ ನಿಲ್ಲದಿರುವೆ
ನೀನಾದರೂ ಸಮಾಜದ ಕಣ್ಣ ತೆರೆ
ಕಾಣದ ದೇವನ ಮರ್ಮವ ತೋರೆ


ಸತೀಶ್ ಅವರ ಕವನ -
ಕೊನೆಯಾಗದ ಅಹವಾಲು

ಇಲ್ಲಿ ತೆರೆ ಸರಿದಿಹ ಸರಿ ಸವಾಲು
ನಿಲ್ಲದೆ ಓಡುವ ನೋಟದ ಪಾಲು.

ಕತ್ತಲೆಯಿಂದ ಬೆಳಕಿನವರೆಗೆ
ಬೆಳಕಿನಿಂದ ಬಲು ದೂರದವರೆಗೆ
ನಿಲುಕಿಹ ದೃಷ್ಟಿ ಎಲ್ಲೋ ದೂರ
ಹತ್ತಿರ ಕತ್ತಲು ನೆಳಲು ಅಪಾರ
ಬಾನೂ ಭೂಮಿ ಕೂಡುವ ಸ್ಥಳವು
ಹತ್ತಿರ ಸಿಕ್ಕೂ ಕೈಗೆ ದೂರವು.

ಜೊತೆಜೊತೆಯಾಗಿಹ ಉಕ್ಕಿನ ಕಂಬಿ
ಹತ್ತಿರವಿದ್ದೂ ಸೇರವು ನಂಬಿ
ಯಾರಲಿ ನಂಬಿಕೆ ಏನೋ ಕಷ್ಟ
ಜಾಡಿರದ ಗೂಡಿಗೆ ಏನೋ ನಷ್ಟ
ಗುಡ್ಡವ ಸೀಳುವ ಸುರಂಗ ಮಾರ್ಗ
ಬೇಗುದಿಯಲ್ಲಿ ಕೊಳೆಯುವ ವರ್ಗ.

ಎಲ್ಲೋ ತೆರೆದು ಹೊರಟಿಹ ದೂರಕೆ
ತಿಳಿ ಹೇಳುವ ಜಾಡಿನ ಕುಹಕಕೆ
ಗಾಳಿಯ ತೀಡಿ ಸ್ವಾಗತ ಬೀರೋ
ಹಚ್ಚನೆ ಹಸಿರಿನ ಎಲೆಗಳ ತೇರೋ
ಮಾರ್ಗವು ಕೊನೆಯಾದಂತೆ ಕಂಡೂ
ತಿರುಗಿ ನೋಡದೆ ಹೊರಟಿಹ ದಂಡು.

ಅಲ್ಲಿ ತೆರೆ ಸರಿಸಿಹ ಸರಿ ಸವಾಲು
ಕೊನೆಯಾಗದ ಪರಿ ಅಹವಾಲು.


ಕುಮಾರ ಸ್ವಾಮಿ ಕಡಾಕೊಳ್ಳ ಅವರ ಕವನ -
ಹಳಿ ಬಂಡಿ

ಉದ್ದುದ್ದ ಕಬ್ಬಿಣದ ಎರಡು ಹಳಿ
ಹಡ್ಡಡ್ಡ ಹಳಿ ಬಿಗಿ ಹಿಡಿತಕೆ ಬೆಲಗು
ಒಟ್ಟಿಗೆ ಬಿಗಿಯಾಗಿ ಹಿಡಿದು ಕಟ್ಟಿರಲು
ನಾನು ಹಳಿಬಂಡಿ ಓಡಲು ಅಣಿನೋಡು

ತೆವಳ ಬೇಕು ಹಳಿಯ ಮೇಲೆ
ನುಸುಳ ಬೇಕು ನೆಲದಿಡ್ಡಿಯೊಳಗೆ
ತಪ್ಪಿದರೆ ದಾಯ ಮುಕ್ಕುವುದು ಬದುಕು
ತಪ್ಪಿಗೆ ಹೊಣೆಯಾರು ತಿಳಿಸುವರು ಯಾರು?

ಗುಡ್ಡ ಏರುವೆನು ಅಡ್ಡ ಬಂದರೇನು
ಹಳ್ಳ ದಾಟುವೆನು ಅಗಲ ಆಳ ಇದ್ದರೇನು
ಸುತ್ತು ಬಳಸು ಎನ್ನುವ ಪರಿವೆನಗಿಲ್ಲ
ಗಾಲಿಯ ಹಡಿಯಲ್ಲಿ ಹಳಿ ನೀನು ಮಲಗಿರಲು ಸಾಕು

ಹಿಂದೆ ಅಮರಿ ಅಡರಿದೆ ಕಾವಳು
ಮುಂದೆ ನುಸುಳಿದರೆ ಬೆಂಬೆಳಗು
ಬೆಳಗು ಕಾವಳುಗಳ ತೆರಹು ತಿಳಿಯದೆನಗೆ
ನೀ ತೋರಿದಂತೆ ತೆವಳುವುದೆನ್ನ ಕೆಲಸ

ಅದು ಇದು ಎಂಬ ಗೆಂಟು ಮಡಿ ಎನಗಿಲ್ಲ
ಹೊತ್ತು ಸಾಗುವೆನು ಒಡಲಲ್ಲಿಟ್ಟದನ್ನು
ತೋರಿಸಿದಂತೆ ನಡೆಯುವುದೆನ್ನ ದಿಟ
ಸೋಲಿಗೆ ನೆಪ ನೀನಲ್ಲದೆ ನಾನಾಲ್ಲವಲ್ಲ

ನನ್ನ ಬದುಕಿನ ಎಳೆ ಮನುಜ ನಿನ್ನ ಹಿಡಿತದಲಿ
ಎಳೆವಾಡಿಸಿದಂತೆ ಅಡುವನು ನಾನು
ಓಡಲು ಅಣಿಯಾಗಿಹೆನು ಈಗ ಓಡಲೇನು
ನೀನೇಳಿದಂತೆ ನುಗ್ಗುವುದೊಂದೆನ್ನ ಬದುಕು

ಕುಕೂಊ...
ಪುಣೆ

ಒರೆ ತಿಳಿವು:
ಗೆಂಟು-->ತೆರಹು--> ಭೇದ
ಬೆಲಗು--> ಕಟ್ಟಿಗೆ, ಲೋಹದ ಅಡ್ಡ ಪಟ್ಟಿ
ನೆಲದಿಡ್ಡಿ---> ಸುರಂಗ
ಹಳಿಬಂಡಿ-->ರಯ್ಲು, ಉಗಿಬಂಡಿ, ಹೊಗೆಬಂಡಿ

3 comments:

bhadra said...

ದೇವನ ಕನ್ನಡಿ


ಹೋಗುತಿಹೆ ನೀ ಎತ್ತ
ನಿನಗೆ ನಾ ಹಾದಿ ತೋರಿಸಿದತ್ತ
ಅದೋ ಹೊರಡು ದಿಗಂತದತ್ತ
ನಾನಿಲ್ಲದೇ ನೀನಿಲ್ಲ
ಒಬ್ಬಂಟಿಯೆಂಬ ಹೆದರಿಕೆ ಸಲ್ಲ

ನಿನ್ನ ಮೈಮೇಲೆ ಹರಿದಾಡುವವರಿನ್ನೆಷ್ಟು?
ಎಲ್ಲರ ಭಾರವ ತಡೆಯಬಲ್ಲೆಯೇನು?
ಒಳಿತಲ್ಲವೀ ನಿನಗೀ ಅಹಂಕಾರ
ನೀ ಆಗಿರುವೆ ಪರಾವಲಂಬಿ
ಈ ಭುವಿಯ ಮೇಲೆ

ನೋಡತ್ತ ಸುಂದರ ಕಾನನ ಸಿರಿ
ಇಂದಿಹುದು ನಾಳೆ ಇರುವುದಾ?
ಬಾ ಇಂದೇ ನಿನಗೆ ಅದರ ರುಚಿ ಉಣಿಸುವೆ
ನಾಳೆ ಮೆಲುಕಾದರೂ ಹಾಕುವಿಯಂತೆ
ಇಂದು ಉಣದಿದ್ದರೆ ನಾಳೆಗಿನ್ನೆಲ್ಲಿಯ ಮೆಲುಕು
ಸಮುದ್ರ ತೀರದಲಿ ಹೆಜ್ಜೆ ಛಾಪಿಸಿದ ಉಸುಕು

ಹೊಕ್ಕುವೆ ಸುರಂಗದಲಿ
ನಿನ್ನ ನಂಬಿದವರಿಗೆ ಹಾದಿ ತೋರುವೆ
ಕಾಲಿಡದ ಕಾನನದಲಿ
ಹೊರತರುವೆ ಕತ್ತಲಲಿ
ಕಣ್ಣಿದ್ದರೂ ಕಾಣದವಗೆ ಬೆಳಕ ತೋರಿಸುವೆ

ತೋರು ನೀ ನಿಸರ್ಗ ದೇವಿಯ ಸಿರಿ
ಜನ ಕಾಣದ ದೇವನ ಪರಿ
ನಿನಗಿಲ್ಲವೇ
ಜೀವ
ಹೀಗಳೆಯುವ ಭಾವ
ಎಲ್ಲವನೂ ಸಹಿಸಿ
ಓಡುವೆ, ಓಡುತಲಿರುವೆ
ಒಂದೆಡೆ ನಿಲ್ಲದಿರುವೆ
ನೀನಾದರೂ ಸಮಾಜದ ಕಣ್ಣ ತೆರೆ
ಕಾಣದ ದೇವನ ಮರ್ಮವ ತೋರೆ

Satish said...

ಕೊನೆಯಾಗದ ಅಹವಾಲು

ಇಲ್ಲಿ ತೆರೆ ಸರಿದಿಹ ಸರಿ ಸವಾಲು
ನಿಲ್ಲದೆ ಓಡುವ ನೋಟದ ಪಾಲು.

ಕತ್ತಲೆಯಿಂದ ಬೆಳಕಿನವರೆಗೆ
ಬೆಳಕಿನಿಂದ ಬಲು ದೂರದವರೆಗೆ
ನಿಲುಕಿಹ ದೃಷ್ಟಿ ಎಲ್ಲೋ ದೂರ
ಹತ್ತಿರ ಕತ್ತಲು ನೆಳಲು ಅಪಾರ
ಬಾನೂ ಭೂಮಿ ಕೂಡುವ ಸ್ಥಳವು
ಹತ್ತಿರ ಸಿಕ್ಕೂ ಕೈಗೆ ದೂರವು.

ಜೊತೆಜೊತೆಯಾಗಿಹ ಉಕ್ಕಿನ ಕಂಬಿ
ಹತ್ತಿರವಿದ್ದೂ ಸೇರವು ನಂಬಿ
ಯಾರಲಿ ನಂಬಿಕೆ ಏನೋ ಕಷ್ಟ
ಜಾಡಿರದ ಗೂಡಿಗೆ ಏನೋ ನಷ್ಟ
ಗುಡ್ಡವ ಸೀಳುವ ಸುರಂಗ ಮಾರ್ಗ
ಬೇಗುದಿಯಲ್ಲಿ ಕೊಳೆಯುವ ವರ್ಗ.

ಎಲ್ಲೋ ತೆರೆದು ಹೊರಟಿಹ ದೂರಕೆ
ತಿಳಿ ಹೇಳುವ ಜಾಡಿನ ಕುಹಕಕೆ
ಗಾಳಿಯ ತೀಡಿ ಸ್ವಾಗತ ಬೀರೋ
ಹಚ್ಚನೆ ಹಸಿರಿನ ಎಲೆಗಳ ತೇರೋ
ಮಾರ್ಗವು ಕೊನೆಯಾದಂತೆ ಕಂಡೂ
ತಿರುಗಿ ನೋಡದೆ ಹೊರಟಿಹ ದಂಡು.

ಅಲ್ಲಿ ತೆರೆ ಸರಿಸಿಹ ಸರಿ ಸವಾಲು
ಕೊನೆಯಾಗದ ಪರಿ ಅಹವಾಲು.

ಕುಕೂಊ.. said...

** ಹಳಿ ಬಂಡಿ **
ಉದ್ದುದ್ದ ಕಬ್ಬಿಣದ ಎರಡು ಹಳಿ
ಹಡ್ಡಡ್ಡ ಹಳಿ ಬಿಗಿ ಹಿಡಿತಕೆ ಬೆಲಗು
ಒಟ್ಟಿಗೆ ಬಿಗಿಯಾಗಿ ಹಿಡಿದು ಕಟ್ಟಿರಲು
ನಾನು ಹಳಿಬಂಡಿ ಓಡಲು ಅಣಿನೋಡು

ತೆವಳ ಬೇಕು ಹಳಿಯ ಮೇಲೆ
ನುಸುಳ ಬೇಕು ನೆಲದಿಡ್ಡಿಯೊಳಗೆ
ತಪ್ಪಿದರೆ ದಾಯ ಮುಕ್ಕುವುದು ಬದುಕು
ತಪ್ಪಿಗೆ ಹೊಣೆಯಾರು ತಿಳಿಸುವರು ಯಾರು?

ಗುಡ್ಡ ಏರುವೆನು ಅಡ್ಡ ಬಂದರೇನು
ಹಳ್ಳ ದಾಟುವೆನು ಅಗಲ ಆಳ ಇದ್ದರೇನು
ಸುತ್ತು ಬಳಸು ಎನ್ನುವ ಪರಿವೆನಗಿಲ್ಲ
ಗಾಲಿಯ ಹಡಿಯಲ್ಲಿ ಹಳಿ ನೀನು ಮಲಗಿರಲು ಸಾಕು

ಹಿಂದೆ ಅಮರಿ ಅಡರಿದೆ ಕಾವಳು
ಮುಂದೆ ನುಸುಳಿದರೆ ಬೆಂಬೆಳಗು
ಬೆಳಗು ಕಾವಳುಗಳ ತೆರಹು ತಿಳಿಯದೆನಗೆ
ನೀ ತೋರಿದಂತೆ ತೆವಳುವುದೆನ್ನ ಕೆಲಸ

ಅದು ಇದು ಎಂಬ ಗೆಂಟು ಮಡಿ ಎನಗಿಲ್ಲ
ಹೊತ್ತು ಸಾಗುವೆನು ಒಡಲಲ್ಲಿಟ್ಟದನ್ನು
ತೋರಿಸಿದಂತೆ ನಡೆಯುವುದೆನ್ನ ದಿಟ
ಸೋಲಿಗೆ ನೆಪ ನೀನಲ್ಲದೆ ನಾನಾಲ್ಲವಲ್ಲ

ನನ್ನ ಬದುಕಿನ ಎಳೆ ಮನುಜ ನಿನ್ನ ಹಿಡಿತದಲಿ
ಎಳೆವಾಡಿಸಿದಂತೆ ಅಡುವನು ನಾನು
ಓಡಲು ಅಣಿಯಾಗಿಹೆನು ಈಗ ಓಡಲೇನು
ನೀನೇಳಿದಂತೆ ನುಗ್ಗುವುದೊಂದೆನ್ನ ಬದುಕು

ಕುಕೂಊ...
ಪುಣೆ

ಒರೆ ತಿಳಿವು:
ಗೆಂಟು-->ತೆರಹು--> ಭೇದ
ಬೆಲಗು--> ಕಟ್ಟಿಗೆ, ಲೋಹದ ಅಡ್ಡ ಪಟ್ಟಿ
ನೆಲದಿಡ್ಡಿ---> ಸುರಂಗ
ಹಳಿಬಂಡಿ-->ರಯ್ಲು, ಉಗಿಬಂಡಿ, ಹೊಗೆಬಂಡಿ