Wednesday 22 October, 2008

ಚಿತ್ರ ೭೫



















ತವಿಶ್ರೀ ಅವರ ಕವನ:

ಜೀವನವಿಷ್ಟೇ!

ಇದೇ ಕೈಲಾಸ ಇದೇ ವೈಕುಂಠ
ಇಲ್ಲೇ ಸ್ವರ್ಗ ಇಲ್ಲೆ ನರಕ

ಜೀವನವಿಷ್ಟೇ!

ಏಳು, ತೊಳೆ, ಸಾರಿಸು, ಬಾಡಿಸು
ಇಟ್ಟು ಉರ್ಳಿ ಸಾರು
ಅಬ್ಬಕ್ಕೆ ಮಾತ್ರ ಬಾಡು

ಒಲದಾಗೆ ಗೇಯುತಿಹರು ಮಗ ಅವರು
ಸಿಲ್ವಾರ ತಟ್ಟೆ ಪಾತ್ರೆ (ಅಲ್ಯೂಮಿನಿಯಮ್)
ತಲೆಗೇರಿಸಿದೆ ಸಿಂಬಿ
ಒತ್ತು ಉಣ್ಣಕ್ಕಿಕ್ಕಲು ನಾ ಒಂಟೆ

ಹಾದಿಯಲಿ ಹಳ್ಳ ಕೊಳ್ಳ
ಅವುಗಳ ಅರಿವಿಲ್ಲದೇ ನಡೆದಿಹ ನಾ ಮಳ್ಳ
ತುಂಬಿಸಬೇಕಲ್ಲ ಬಳ್ಳ
ತೂರಬೇಕಲ್ಲ ಜೊಳ್ಳ
ನಾವೆಂದಿಗೂ ಆಗೆವು ಕಳ್ಳ

ಎತ್ತುಗಳಿಗೆ ಉಣಿಸು ನೀರು ಕಟ್ಟು
ಮನೆಗೆ ಬಂದು ಎರಡಗುಳು ಗತುಕು
ಹಸುವಿಗೆ ತಿನ್ನಲು ಹುಲ್ಲು, ಬೂಸಾ
ಪಸೆಯಾರಿಸಲು ಬಾನಿಗೆ ನೀರು

ಸಂಜೆ ಬರುವ ಎತ್ತುಗಳಿಗಾಗಿ
ಕೊಟ್ಟಿಗೆಯಲಿ ಎಲ್ಲ ಒತ್ತಟ್ಟು
ಗಂಗೆ ಕೊಡುವ ಹಾಲು ಕರೆ
ಗಂಡ ಮಕ್ಕಳ ಆರೈಕೆ

ಸವೆಸಿದ್ದೇ ಹಾದಿ
ಇಟ್ಟದ್ದೇ ಹೆಜ್ಜೆ
ಆಲಿಸಿದ್ದೇ ಗೆಜ್ಜೆ

ಬಸ್ವೇಸರ ಜಾತ್ರೆಯಲಿ
ಆತ ಕೊಡಿಸಿದ ಕಾಸಿನ ಸರ
ಅಮ್ಮ ಇತ್ತ ಕಾಲುಂಗುರು ಮೂಗುತಿ

ತೆಲಿಗೆ ಹಚ್ಚುವೆ ಕೈಯೆಣ್ಣೆ
ಕಾಲಿಗೆ ಮೆಟ್ಟುವೆ ಹವಾಯಿ
ಕಾಸಿನಗಲದ ಕುಂಕುಮ ಹಣೆಯಲಿ
ಅರಿಸಿನ ಪಟ್ಟೆ ಕೆನ್ನೆಯಲಿ

ಮುನಿಯನೇ ಎನ್ನ ದೈವ
ಚಂದ್ರಿ ಸೋಮರಲ್ಲೇ ಎನ್ನ ಭಾವ
ಎನ್ನ ರಕ್ಷಕ ಹುಣಿಸೇ ಬರಲು

ಎಮಗೆ ಆರ ಚಿಂತೆಯಿಲ್ಲ
ಯಾರಿಗೂ ನಮ್ಮ ಚಿಂತೆಯಿಲ್ಲ
ಹಂಗಿಲ್ಲ
ಜೀವ ಯಾತ್ರೆಗೆ ಎಣೆಯಿಲ್ಲ

ಜೀವನವಿಷ್ಟೇ!



2 comments:

shivu.k said...

ಫೋಟೊ ಎಲ್ಲಿ ತೆಗೆದಿದ್ದು ?
ಸ್ವಲ್ಪ ಅದರ ವಿವರಣೆಯೂ ಇದ್ದರೆ ಚೆನ್ನ.

ಶಿವು.ಕೆ.

Unknown said...

ಜೀವನವಿಷ್ಟೇ!

ಇದೇ ಕೈಲಾಸ ಇದೇ ವೈಕುಂಠ
ಇಲ್ಲೇ ಸ್ವರ್ಗ ಇಲ್ಲೆ ನರಕ

ಜೀವನವಿಷ್ಟೇ!

ಏಳು, ತೊಳೆ, ಸಾರಿಸು, ಬಾಡಿಸು
ಇಟ್ಟು ಉರ್ಳಿ ಸಾರು
ಅಬ್ಬಕ್ಕೆ ಮಾತ್ರ ಬಾಡು

ಒಲದಾಗೆ ಗೇಯುತಿಹರು ಮಗ ಅವರು
ಸಿಲ್ವಾರ ತಟ್ಟೆ ಪಾತ್ರೆ (ಅಲ್ಯೂಮಿನಿಯಮ್)
ತಲೆಗೇರಿಸಿದೆ ಸಿಂಬಿ
ಒತ್ತು ಉಣ್ಣಕ್ಕಿಕ್ಕಲು ನಾ ಒಂಟೆ

ಹಾದಿಯಲಿ ಹಳ್ಳ ಕೊಳ್ಳ
ಅವುಗಳ ಅರಿವಿಲ್ಲದೇ ನಡೆದಿಹ ನಾ ಮಳ್ಳ
ತುಂಬಿಸಬೇಕಲ್ಲ ಬಳ್ಳ
ತೂರಬೇಕಲ್ಲ ಜೊಳ್ಳ
ನಾವೆಂದಿಗೂ ಆಗೆವು ಕಳ್ಳ

ಎತ್ತುಗಳಿಗೆ ಉಣಿಸು ನೀರು ಕಟ್ಟು
ಮನೆಗೆ ಬಂದು ಎರಡಗುಳು ಗತುಕು
ಹಸುವಿಗೆ ತಿನ್ನಲು ಹುಲ್ಲು, ಬೂಸಾ
ಪಸೆಯಾರಿಸಲು ಬಾನಿಗೆ ನೀರು

ಸಂಜೆ ಬರುವ ಎತ್ತುಗಳಿಗಾಗಿ
ಕೊಟ್ಟಿಗೆಯಲಿ ಎಲ್ಲ ಒತ್ತಟ್ಟು
ಗಂಗೆ ಕೊಡುವ ಹಾಲು ಕರೆ
ಗಂಡ ಮಕ್ಕಳ ಆರೈಕೆ

ಸವೆಸಿದ್ದೇ ಹಾದಿ
ಇಟ್ಟದ್ದೇ ಹೆಜ್ಜೆ
ಆಲಿಸಿದ್ದೇ ಗೆಜ್ಜೆ

ಬಸ್ವೇಸರ ಜಾತ್ರೆಯಲಿ
ಆತ ಕೊಡಿಸಿದ ಕಾಸಿನ ಸರ
ಅಮ್ಮ ಇತ್ತ ಕಾಲುಂಗುರು ಮೂಗುತಿ

ತೆಲಿಗೆ ಹಚ್ಚುವೆ ಕೈಯೆಣ್ಣೆ
ಕಾಲಿಗೆ ಮೆಟ್ಟುವೆ ಹವಾಯಿ
ಕಾಸಿನಗಲದ ಕುಂಕುಮ ಹಣೆಯಲಿ
ಅರಿಸಿನ ಪಟ್ಟೆ ಕೆನ್ನೆಯಲಿ

ಮುನಿಯನೇ ಎನ್ನ ದೈವ
ಚಂದ್ರಿ ಸೋಮರಲ್ಲೇ ಎನ್ನ ಭಾವ
ಎನ್ನ ರಕ್ಷಕ ಹುಣಿಸೇ ಬರಲು

ಎಮಗೆ ಆರ ಚಿಂತೆಯಿಲ್ಲ
ಯಾರಿಗೂ ನಮ್ಮ ಚಿಂತೆಯಿಲ್ಲ
ಹಂಗಿಲ್ಲ
ಜೀವ ಯಾತ್ರೆಗೆ ಎಣೆಯಿಲ್ಲ

ಜೀವನವಿಷ್ಟೇ!