Wednesday 11 February, 2009

ಚಿತ್ರ ೯೧



ತವಿಶ್ರೀ :
ಕಲಿತ ಪಾಠ


ಅಂಟಿಯೂ ಅಂಟದಂತಿಹುದು
ತನ್ನೆದೆಯ ಮೇಲಿನ ನೀರ ಗುಳ್ಳೆಯ ಹೊರುವುದು
ಹನಿ ಹನಿಯಾಗಿ ಬೀಳುವುದ ತಡೆವುದು
ತಡೆದು ಬಾಯಾರಿದವಗೆ ಉಣಿಸುವುದು

ತನಗೆ ಮಾತ್ರ ಹನಿ ಮಾತ್ರವೂ ಹಿಡಿದಿಟ್ಟುಕೊಳ್ಳದು
ಆರೈಕೆ ಇಲ್ಲದೆ ನಿಸರ್ಗದಿ ಬೆಳೆವುದು
ಮಂದಿ ಮಂದೆಗಳಿಗೆ ಉಣಿಸುವುದು
ಅನಂತ ಆಗಸ ಏರುವ ಛಾತಿ ಇದ್ದರೂ ಕೆಳಗೇ ನೋಡುತಿಹುದು

ಸ್ವಾರ್ಥಿಗೆ ನಿಸ್ವಾರ್ಥದರಿವು ಮೂಡಿಸುವುದು
ಎನಗಿಂತ ಕಿರಿಯರಿಲ್ಲ
ಎನಗೆಲ್ಲ ಹಿರಿಯರೆಲ್ಲ ಎಂದು ಸಾರುವುದು
ಇಂದಿದ್ದು ನಾಳೆಗೆ ಹೇಳಹೆಸರಿಲ್ಲದೆ ಹೋಗುವುದು

ತಡವಲು ಗಡುಸಿನಂತೆ ತೋರುವುದು
ಚಿವುಟಲು ಹಸುಗೂಸಿನಂತೆ ಕಣ್ಣೀರ್ಗರೆವುದು
ಎದುರಾಡದು, ಹಿಂಸಿಸದು
ಉತ್ತಮ ಪಾರಮಾರ್ಥಿಕ ಚಿಂತನೆಗೆ ಒತ್ತು ನೀಡುತಿಹುದು

ಅಂಟಿಯೂ ಅಂಟದಿರು
ಯಾರಿಗೆ ಯಾರೂ ಅಲ್ಲ
ಆತ್ಮಕೆ ನಂಟಿಲ್ಲ ಅಂಟಿಲ್ಲ ಎಂಬುದ
ಸುಲಭದಿ ಜೀವನ ಪರಿಯ ತಿಳಿ ಹೇಳುವುದು

ಇದರಿಂದ ಕಲಿವ ಪಾಠ ಇಹುದಲ್ಲವೇ?
ನಿಸರ್ಗದ ಅಂಶವಿದು ದೈವಾಂಶವಲ್ಲವೇ?
ಇದ ತಿಳಿವುದು ಸುಲಭವಲ್ಲವೇ
ನಿಸರ್ಗವ ರಕ್ಷಿಸೋಣ - ನಮ್ಮನು ನಾವು ರಕ್ಷಿಸೋಣ

3 comments:

sunaath said...

ಒಂದೇ ಎಲೆಯ ಮೇಲೆ focus ಮಾಡಿ, ಸುಂದರವಾದ ಹನಿಗಳನ್ನು ತೋರಿಸಿದ್ದೀರಿ. ಈ ಚಿತ್ರವೇ ಒಂದು ಕವನವಾಗಿದೆ.

Unknown said...

ಕಲಿತ ಪಾಠ

ಅಂಟಿಯೂ ಅಂಟದಂತಿಹುದು
ತನ್ನೆದೆಯ ಮೇಲಿನ ನೀರ ಗುಳ್ಳೆಯ ಹೊರುವುದು
ಹನಿ ಹನಿಯಾಗಿ ಬೀಳುವುದ ತಡೆವುದು
ತಡೆದು ಬಾಯಾರಿದವಗೆ ಉಣಿಸುವುದು

ತನಗೆ ಮಾತ್ರ ಹನಿ ಮಾತ್ರವೂ ಹಿಡಿದಿಟ್ಟುಕೊಳ್ಳದು
ಆರೈಕೆ ಇಲ್ಲದೆ ನಿಸರ್ಗದಿ ಬೆಳೆವುದು
ಮಂದಿ ಮಂದೆಗಳಿಗೆ ಉಣಿಸುವುದು
ಅನಂತ ಆಗಸ ಏರುವ ಛಾತಿ ಇದ್ದರೂ ಕೆಳಗೇ ನೋಡುತಿಹುದು

ಸ್ವಾರ್ಥಿಗೆ ನಿಸ್ವಾರ್ಥದರಿವು ಮೂಡಿಸುವುದು
ಎನಗಿಂತ ಕಿರಿಯರಿಲ್ಲ
ಎನಗೆಲ್ಲ ಹಿರಿಯರೆಲ್ಲ ಎಂದು ಸಾರುವುದು
ಇಂದಿದ್ದು ನಾಳೆಗೆ ಹೇಳಹೆಸರಿಲ್ಲದೆ ಹೋಗುವುದು

ತಡವಲು ಗಡುಸಿನಂತೆ ತೋರುವುದು
ಚಿವುಟಲು ಹಸುಗೂಸಿನಂತೆ ಕಣ್ಣೀರ್ಗರೆವುದು
ಎದುರಾಡದು, ಹಿಂಸಿಸದು
ಉತ್ತಮ ಪಾರಮಾರ್ಥಿಕ ಚಿಂತನೆಗೆ ಒತ್ತು ನೀಡುತಿಹುದು

ಅಂಟಿಯೂ ಅಂಟದಿರು
ಯಾರಿಗೆ ಯಾರೂ ಅಲ್ಲ
ಆತ್ಮಕೆ ನಂಟಿಲ್ಲ ಅಂಟಿಲ್ಲ ಎಂಬುದ
ಸುಲಭದಿ ಜೀವನ ಪರಿಯ ತಿಳಿ ಹೇಳುವುದು

ಇದರಿಂದ ಕಲಿವ ಪಾಠ ಇಹುದಲ್ಲವೇ?
ನಿಸರ್ಗದ ಅಂಶವಿದು ದೈವಾಂಶವಲ್ಲವೇ?
ಇದ ತಿಳಿವುದು ಸುಲಭವಲ್ಲವೇ
ನಿಸರ್ಗವ ರಕ್ಷಿಸೋಣ - ನಮ್ಮನು ನಾವು ರಕ್ಷಿಸೋಣ

ದೀಪಸ್ಮಿತಾ said...

ಸುನಾಥ್ ಹೇಳಿದ ಹಾಗೆ, ಎಲೆಯೇ ಒಂದು ಕವನದ ಹಾಗಿದೆ