tag:blogger.com,1999:blog-3455566237837454475.post7650677119565097092..comments2023-09-18T16:32:05.644+05:30Comments on ಚಿತ್ರಕವನ: ಚಿತ್ರ ೭೧Shreehttp://www.blogger.com/profile/11541927845221428283noreply@blogger.comBlogger2125tag:blogger.com,1999:blog-3455566237837454475.post-91202240922112814202008-09-29T15:13:00.000+05:302008-09-29T15:13:00.000+05:30ಎಲ್ಲೂ ನಿಲ್ಲದ ನಡೆಕಗ್ಗತ್ತಲು ಕಾಡುವಾಗ ನೆಲೆಸಿತ್ತು ಶಾಂತಿ...<B>ಎಲ್ಲೂ ನಿಲ್ಲದ ನಡೆ</B><BR/><BR/>ಕಗ್ಗತ್ತಲು ಕಾಡುವಾಗ ನೆಲೆಸಿತ್ತು ಶಾಂತಿ<BR/>ಬಾನ ರವಿ ಬಂದ ಕ್ಷೋಭೆಗಳ ತಂದ<BR/>ಭುವಿಯನ್ನು ಬೆಳಗಿ ಓಟದಲಿ ಪಳಗಿ<BR/>ಮತ್ತೆ ಕತ್ತಲಾಗುತ್ತಿದ್ದಂತೆ ನಾಚಿ ನೀರಾಗಿ<BR/>ತನ್ನ ಆವರಣದಲಿ ಓಕುಳಿ ಚೆಲ್ಲಿ<BR/>ಎಲ್ಲಾ ಕಡೆಗೂ ಕಿರಣಗಳು ಚೆಲ್ಲಾಪಿಲ್ಲಿ<BR/>ಹರಡುವಂತೆ ಮಾಡಿ ದಿನನಿತ್ಯದ ಮೋಡಿ<BR/>ಕತ್ತಲನು ಸುತ್ತ ಹರವಿ ಮತ್ತೆಲ್ಲೋ ಓಡುತಿಹನು ರವಿ.<BR/><BR/>ಇವನ್ನೆಲ್ಲಾ ನೋಡಿಯೂ ನೋಡದೆಯೇ<BR/>ತಲೆತೂಗುವ ತೆಂಗುಗಳ ತಪ್ಪೇನು<BR/>ಮುಗಿಲಿನೆಡೆಗೆ ಚಿಮ್ಮುವ ಮರದುತ್ಸಾಹಕೆ<BR/>ಅಡ್ಡ ಬೀಸುವ ಗಾಳಿ-ಕಿರಣಗಳ ಒಪ್ಪೇನು.<BR/><BR/>ಇಲ್ಲಿ ಸತ್ತು ಮತ್ತಿನ್ನೆಲ್ಲೋ ಹುಟ್ಟುವ ಸೂರ್ಯ<BR/>ದಿನ ಸಾಯುವವರಿಗೆ ಅಳುವ ಕಾರ್ಯ<BR/>ಜೋಪಡಿಯಲ್ಲಿ ಜೊಂಪಿನಲಿ ಮಲಗಿ<BR/>ಆಸೆ ಕಂಡಂತೆ ಸುಖನಿದ್ರೆಯಲಿ ಮುಲುಗಿ<BR/>ಕಂಡೂ ಕೈಗೆ ಸಿಗದ ಕನಸುಗಳ ನಂಬಿ<BR/>ಕಿರಣಗಳು ಹಾಯಿ ದೋಣಿಯ ತುಂಬಿ<BR/>ಒಂದು ಎಡೆಯಿಂದ ಮತ್ತೊಂದು ಕಡೆಗೆ<BR/>ಎಂದೋ ಹೊರಟ ಎಲ್ಲೂ ನಿಲ್ಲದ ನಡೆಗೆ.Satishhttps://www.blogger.com/profile/18348145837047496415noreply@blogger.comtag:blogger.com,1999:blog-3455566237837454475.post-14026208643889728662008-09-28T10:14:00.000+05:302008-09-28T10:14:00.000+05:30ಸಿರಿ ನಾಡುಇತ್ತ ನೋಡು ಕಲ್ಪವೃಕ್ಷಗಳ ನಾಡುಸುತ್ತಲೂ ಹರಡುತಿದ...<B>ಸಿರಿ ನಾಡು</B><BR/><BR/>ಇತ್ತ ನೋಡು ಕಲ್ಪವೃಕ್ಷಗಳ ನಾಡು<BR/>ಸುತ್ತಲೂ ಹರಡುತಿದೆ ರವಿಯ ತಂಪಿನ ಜಾಡು<BR/>ಕಂಗೊಳಿಸುತಿಹುದು ಲಲಿತ ಕಲೆಗಳ ಬೀಡು<BR/>ಜಾನುವಾರು ಹಕ್ಕಿಗಳು ಸೇರುತಿವೆ ಗೂಡು<BR/><BR/>ಯಾರೆಂದರು - ಸಾಯುತಿಹುದು ಈ ನಾಡು<BR/>ಬೆಳಗಿ ಜಗಮಗಿಸುತಿಹುದು ಕಗ್ಗತ್ತಲೆಯ ಕಾಡು<BR/>ಬೆಳಕ ಮೂಡಿಸಿದುದು, ರವಿ ಮೀರಿಸಿದ ಕವಿ<BR/>ಬೆಳಕಿನ ಜಾಡ ಹುಡುಕು ಹೊರಟಿಹನು ರವಿ<BR/><BR/>ಎಂದಿನಂತೆ ಬೈಗಿನಲಿ ಕಣ್ಬಿಟ್ಟನು ನಮ್ಮ ರವಿ<BR/>ಸುತ್ತಲೂ ಕತ್ತಲಿನ ಬದಲು ಕಂಗೊಳಿಸುವ ಸವಿ<BR/>ಮೂಗಿಗೆ ಬಡಿಯುತಿಹುದು ಶ್ರೀಗಂಧದ ಹವೆ<BR/>ಭೂತಾಯಿಯ ಮಡಿಲಿನಿಂದ ಹೊರಹೊಮ್ಮುತಿಹುದು ಹಬೆ<BR/><BR/>ಹಸಿದು ಬಳಲಿದವಗೆ ತಂಪೆರೆಯುವ ಬೊಂಡ<BR/>ಉಡುಗುತಿಹ ಶಕ್ತಿಗೆ ಚೈತನ್ಯ ತುಂಬುವ ಹಯನು<BR/>ಜಗವ ಸಾಗಿಸುತಿಹ ಚಕ್ರದ ಚಕ್ಕದ ಬಂಡಿ<BR/>ಯಾರೂ ಕಂಡಿರದ ಹೊನ್ನಿನ ಗಿಂಡಿ<BR/><BR/>ನಗರಗಳ ಜಂಜಾಟದ ಸೋಂಕಿರದ <BR/>ಹಳ್ಳಿನಾಡಿದು ನಾಗರೀಕತೆಯ ಬುನಾದಿ<BR/>ಯಾವುದಿದೀ ವಿಪರೀತದ ಶಕ್ತಿ?<BR/>ಪಂಚಭೂತಗಳಿಗೂ ಸಡ್ಡೊಡೆಯುವ ಯುಕ್ತಿ<BR/>ಸಿರಿಯ ಮಡಿಲಲಿ ತುಂಬಿ ತುಳುಕಿಸಿಹ ಕನ್ನಡಮ್ಮ<BR/>ಅಹರ್ನಿಶಿ ಇರಲಿ ಇವಳ ಮೇಲೆ ನಮ್ಮೆಲ್ಲರ ಭಕ್ತಿbhadrahttps://www.blogger.com/profile/13079618890372528165noreply@blogger.com