Tuesday 26 August, 2008

ಚಿತ್ರ ೬೭



ಚಿತ್ರ ೬೭ ಕ್ಕೆ ತಿರುಕ,ಸತೀಶ್ ಮತ್ತು ಕುಮಾರ ಸ್ವಾಮಿ ಕಡಾಕೊಳ್ಳ ಅವರು ಬರೆದ ಕವನಗಳು ಹೀಗಿವೆ

ತಿರುಕ ಅವರ ಕವನ-
ಸಿದ್ಧತೆಗೆ ಚಿಂತನೆ


ಎತ್ತಲೋ ದೃಷ್ಟಿ - ಯಾವುದೋ ಚಿಂತೆ
ಹಳೆಯ ಕಡತದಲ್ಲಿ ಸಿಲುಕಿದ ನೋಟ
ಮೆಲುಕು ಹಾಕುತ್ತಲೇ ಕರಿಗೂದಲು
ಬಿಳಿಯಾಯಿತು
ಅದನೂ ಮನ ತಿಳಿಯದಾಯಿತು
ತಿಳಿದೊಡನೆ ಮನ ತಿಳಿಯಾಯಿತು
ಮುಂದಿನ ಅವಘಡವ
ಚಿಂತಿಸಿ ಮನ ಹೆಪ್ಪುಗಟ್ಟುತ್ತಿತ್ತು

ತಲೆಯ ಮಾಸಿದ ಬಟ್ಟೆ
ಯೊಳಗಣ ತಿಗಣೆ ತಿಳಿಯದಾಯಿತು
ಕಚ್ಚಿ ನೆತ್ತರು ಹೀರಿ
ನವೆಯಾದೊಡೆ - ಚಿಂತೆಯ ಕ್ಷಣ
ಗಳು ನಲಿವಾಯಿತು

ಗಾಡಿಯ ಹಿಡಿಯುವುದೇ ಒಂದು
ಚಿಂತೆಯಾಗಿತ್ತು
ಗಾಡಿಯೊಳಗೆ ಕುಳಿತೆಡೆ
ಮುಂದಾಗುವುದರ
ಚಿಂತೆ ಮನೆ ಮಾಡಿತ್ತು

ಕೊಟ್ಟ ಹೆಣ್ಣು ಕುಲಕ್ಕೆ ಹೊರಗು
ಮಗಳ ಕಳುಹಿಸಿದೆಡೆ ಅಂದುಕೊಂಡದ್ದು
ತಪ್ಪಾಗಿತ್ತು
ಹೀನರ ದುಷ್ಕೃತ್ಯಕ್ಕೆ ಮಗು ಬಲಿಯಾಗಿತ್ತು
ಮುಂದಾಗುವುದರ
ಚಿಂತೆ ಮನೆ ಮಾಡಿತ್ತು

ಅಂದು - ಕೂಸುಗಾಣದ ಮನೆಗೆ
ಅಂಬೆಗಾಲಿಟ್ಟು ಬಂದು
ಮನವೆಂಬ ದುಕಾನು
ಮನೆಯೆಂಬ ಉಗ್ರಾಣವ ತುಂಬಿತ್ತು
ನಕ್ಕು ನಲಿದು ಎಲ್ಲರ ಹಸಿವು ಹಿಂಗಿಸಿತ್ತು

ಇಂದು - ಕೂಸುಕಾಣದ ಮನೆಯ
ತುಂಬಿತ್ತು
ಗಂಡ, ಮಾವ, ಅತ್ತೆಯರ
ಹೀಗಳಿಕೆಗೆ ತುತ್ತಾಗಿತ್ತು
ತನ್ನ ಬಾಳಿಗೆ ತಾನೇ ಕುತ್ತಾಗಿತ್ತು


ಸತೀಶ್ ಅವರ ಕವನ -
ಎತ್ತಲೋ ಓಡುತಲಿರುವ ಮನಸ


ಇಣಕಿ ಹಾಕೋ ಮುಖಗಳು ಇರಲಿ
ಹಣಕಿ ಹಾಕೋ ಯೋಚನೆ ಸಾಕು
ಮೈ ಮನ ಸೇರಿಸಿ ಎಲ್ಲ ಆವರಿಸಿ
ಹೊಚ್ಚಿದ ದುಗುಡ ತೆಗೆದು ಬಿಸಾಕು.

ದೂರದ ದೃಷ್ಟಿ ನಿರಿಗೆಯ ಮುಖವು
ಎತ್ತಲೋ ಓಡುತಲಿರುವ ಮನಸು
ಒಟ್ಟಿಗೆ ಸಾಲಲಿ ನಿಂತು ನೋಡುತಿಹ
ಹಾಯಿ ದೋಣಿಯ ಗಾಳಿಯ ಕನಸು.

ಹತ್ತಿರದ ನಿಲುವಿಗೆ ಇನ್ನಷ್ಟು ದೂರ
ಮತ್ತೆ ಬಾರವು ನಿನ್ನೆಯ ನೋಟಗಳು
ಇಂದನು ಹಾರಿಸಿ ಕರೆದೊಯ್ಯುತಿವೆ
ಕಾಳಜಿ ನಾಳೆ ಎನ್ನುವ ಸಂತೆಗಳು.

ಏತಕೆ ಚಿಂತೆ ಸೊರಗುವುದಂತೆ
ಮನಸೆಂಬುವ ದೊಡ್ಡ ಬಡಪಾಯಿ
ಕಷ್ಟವೋ ಸುಖವೋ ಅಳಿಯದೆ ಇರಲಿ
ಗೆದ್ದೇ ಗೆಲ್ಲುವೆನೆಂಬ ಸಿಪಾಯಿ.


ಕುಮಾರ ಸ್ವಾಮಿ ಕಡಾಕೊಳ್ಳ ಅವರ ಕವನ -
ನೆಚ್ಚಿಕೆ

ಬಿಳಿ ಚಿಮ್ಮುರಿಯ
ಹುರಿಮಾಡಿ ಬಿಗಿದಿರಲು
ಎಂತ ಠೀವಿಯ ನೋಟ
ಸುಕ್ಕಾದರೂ ಮೈಮಾಟ

ಹುರಿ ಮೀಸೆ ಇಲ್ಲ
ಹುರಿಯಾಯಿತು ಗಲ್ಲ
ತೊದಲಾಯಿತು ಸೊಲ್ಲು
ಈತ ಬದುಕೆಲ್ಲ ಬಲ್ಲ

ನೆಟ್ಟ ನೋಟಕ್ಕಿಲ್ಲ
ಬೆದರಿಕೆಯ ಕಾಟ
ಇಳಿ ವಯಸ್ಸಿನಲ್ಲೂ
ಪದುಳವಾದ ನೋಟ

ಸುತ್ತುವರಿದರು ಸುತ್ತ
ಬವಣೆಗಳ ಗುಚ್ಚ
ಬದಲಾಗಲಿಲ್ಲ ಈತನ
ಬದುಕಿನ ಬಯಲಾಟ

ಇದ್ದರೆಷ್ಟು ಸಿರಿ
ಸಾವು ತಪ್ಪುವುದಿಲ್ಲ
ತಪ್ಪಿಸುವರು ಯಾರಿಲ್ಲ ಇದ
ತಿಳಿದು ತೆಪ್ಪಗೆ ಕುಂತನಲ್ಲ

ಯಾರೀಗೋ ದಾರಿಯಲಿ
ಕಾದಿರಲು ಬಾಳಿನಲಿ
ಕಾಣರೊಬ್ಬರು ಇಲ್ಲಿ
ಕಂಡೆನೆಂಬ ನೆಪದಲ್ಲಿ

ಗಲ್ಲಕ್ಕೆ ಕೈಯುಂಟು
ಆತು ಕುಂತಿರಲು
ಗೆಲುವಿನಲಿ ಕುಳಿತಿಹನು
ಗೆಲುವೆನೆಂಬ ನಂಬುಗೆಯಲಿ

** ಕುಕೂಊ...

4 comments:

Unknown said...

ಸಿದ್ಧತೆಗೆ ಚಿಂತನೆ

ಎತ್ತಲೋ ದೃಷ್ಟಿ - ಯಾವುದೋ ಚಿಂತೆ
ಹಳೆಯ ಕಡತದಲ್ಲಿ ಸಿಲುಕಿದ ನೋಟ
ಮೆಲುಕು ಹಾಕುತ್ತಲೇ ಕರಿಗೂದಲು
ಬಿಳಿಯಾಯಿತು
ಅದನೂ ಮನ ತಿಳಿಯದಾಯಿತು
ತಿಳಿದೊಡನೆ ಮನ ತಿಳಿಯಾಯಿತು
ಮುಂದಿನ ಅವಘಡವ
ಚಿಂತಿಸಿ ಮನ ಹೆಪ್ಪುಗಟ್ಟುತ್ತಿತ್ತು

ತಲೆಯ ಮಾಸಿದ ಬಟ್ಟೆ
ಯೊಳಗಣ ತಿಗಣೆ ತಿಳಿಯದಾಯಿತು
ಕಚ್ಚಿ ನೆತ್ತರು ಹೀರಿ
ನವೆಯಾದೊಡೆ - ಚಿಂತೆಯ ಕ್ಷಣ
ಗಳು ನಲಿವಾಯಿತು

ಗಾಡಿಯ ಹಿಡಿಯುವುದೇ ಒಂದು
ಚಿಂತೆಯಾಗಿತ್ತು
ಗಾಡಿಯೊಳಗೆ ಕುಳಿತೆಡೆ
ಮುಂದಾಗುವುದರ
ಚಿಂತೆ ಮನೆ ಮಾಡಿತ್ತು

ಕೊಟ್ಟ ಹೆಣ್ಣು ಕುಲಕ್ಕೆ ಹೊರಗು
ಮಗಳ ಕಳುಹಿಸಿದೆಡೆ ಅಂದುಕೊಂಡದ್ದು
ತಪ್ಪಾಗಿತ್ತು
ಹೀನರ ದುಷ್ಕೃತ್ಯಕ್ಕೆ ಮಗು ಬಲಿಯಾಗಿತ್ತು
ಮುಂದಾಗುವುದರ
ಚಿಂತೆ ಮನೆ ಮಾಡಿತ್ತು

ಅಂದು - ಕೂಸುಗಾಣದ ಮನೆಗೆ
ಅಂಬೆಗಾಲಿಟ್ಟು ಬಂದು
ಮನವೆಂಬ ದುಕಾನು
ಮನೆಯೆಂಬ ಉಗ್ರಾಣವ ತುಂಬಿತ್ತು
ನಕ್ಕು ನಲಿದು ಎಲ್ಲರ ಹಸಿವು ಹಿಂಗಿಸಿತ್ತು

ಇಂದು - ಕೂಸುಕಾಣದ ಮನೆಯ
ತುಂಬಿತ್ತು
ಗಂಡ, ಮಾವ, ಅತ್ತೆಯರ
ಹೀಗಳಿಕೆಗೆ ತುತ್ತಾಗಿತ್ತು
ತನ್ನ ಬಾಳಿಗೆ ತಾನೇ ಕುತ್ತಾಗಿತ್ತು

sunaath said...

ವಾಹ್! ಮೀಸೆ ತಿರುವುತ್ತಿರುವ ಮುದುಕ! ವಯಸ್ಸಾದರೂ ಸಹ ಮುಖದಲ್ಲಿನ ಕಳೆ ಕಡಿಮೆಯಾಗಿಲ್ಲ.

Satish said...

ಎತ್ತಲೋ ಓಡುತಲಿರುವ ಮನಸ

ಇಣಕಿ ಹಾಕೋ ಮುಖಗಳು ಇರಲಿ
ಹಣಕಿ ಹಾಕೋ ಯೋಚನೆ ಸಾಕು
ಮೈ ಮನ ಸೇರಿಸಿ ಎಲ್ಲ ಆವರಿಸಿ
ಹೊಚ್ಚಿದ ದುಗುಡ ತೆಗೆದು ಬಿಸಾಕು.

ದೂರದ ದೃಷ್ಟಿ ನಿರಿಗೆಯ ಮುಖವು
ಎತ್ತಲೋ ಓಡುತಲಿರುವ ಮನಸು
ಒಟ್ಟಿಗೆ ಸಾಲಲಿ ನಿಂತು ನೋಡುತಿಹ
ಹಾಯಿ ದೋಣಿಯ ಗಾಳಿಯ ಕನಸು.

ಹತ್ತಿರದ ನಿಲುವಿಗೆ ಇನ್ನಷ್ಟು ದೂರ
ಮತ್ತೆ ಬಾರವು ನಿನ್ನೆಯ ನೋಟಗಳು
ಇಂದನು ಹಾರಿಸಿ ಕರೆದೊಯ್ಯುತಿವೆ
ಕಾಳಜಿ ನಾಳೆ ಎನ್ನುವ ಸಂತೆಗಳು.

ಏತಕೆ ಚಿಂತೆ ಸೊರಗುವುದಂತೆ
ಮನಸೆಂಬುವ ದೊಡ್ಡ ಬಡಪಾಯಿ
ಕಷ್ಟವೋ ಸುಖವೋ ಅಳಿಯದೆ ಇರಲಿ
ಗೆದ್ದೇ ಗೆಲ್ಲುವೆನೆಂಬ ಸಿಪಾಯಿ.

ಕುಕೂಊ.. said...

** ನೆಚ್ಚಿಕೆ **

ಬಿಳಿ ಚಿಮ್ಮುರಿಯ
ಹುರಿಮಾಡಿ ಬಿಗಿದಿರಲು
ಎಂತ ಠೀವಿಯ ನೋಟ
ಸುಕ್ಕಾದರೂ ಮೈಮಾಟ

ಹುರಿ ಮೀಸೆ ಇಲ್ಲ
ಹುರಿಯಾಯಿತು ಗಲ್ಲ
ತೊದಲಾಯಿತು ಸೊಲ್ಲು
ಈತ ಬದುಕೆಲ್ಲ ಬಲ್ಲ

ನೆಟ್ಟ ನೋಟಕ್ಕಿಲ್ಲ
ಬೆದರಿಕೆಯ ಕಾಟ
ಇಳಿ ವಯಸ್ಸಿನಲ್ಲೂ
ಪದುಳವಾದ ನೋಟ

ಸುತ್ತುವರಿದರು ಸುತ್ತ
ಬವಣೆಗಳ ಗುಚ್ಚ
ಬದಲಾಗಲಿಲ್ಲ ಈತನ
ಬದುಕಿನ ಬಯಲಾಟ

ಇದ್ದರೆಷ್ಟು ಸಿರಿ
ಸಾವು ತಪ್ಪುವುದಿಲ್ಲ
ತಪ್ಪಿಸುವರು ಯಾರಿಲ್ಲ ಇದ
ತಿಳಿದು ತೆಪ್ಪಗೆ ಕುಂತನಲ್ಲ

ಯಾರೀಗೋ ದಾರಿಯಲಿ
ಕಾದಿರಲು ಬಾಳಿನಲಿ
ಕಾಣರೊಬ್ಬರು ಇಲ್ಲಿ
ಕಂಡೆನೆಂಬ ನೆಪದಲ್ಲಿ

ಗಲ್ಲಕ್ಕೆ ಕೈಯುಂಟು
ಆತು ಕುಂತಿರಲು
ಗೆಲುವಿನಲಿ ಕುಳಿತಿಹನು
ಗೆಲುವೆನೆಂಬ ನಂಬುಗೆಯಲಿ

** ಕುಕೂಊ...
01/09/08