Wednesday, 9 September 2009

Thursday, 3 September 2009

ಚಿತ್ರ ೧೧೮




ಅರುಣ್:

ಗಿರಿಯ ತುದಿಯ ಸಿರಿಯ ಪಡೆಯೆ
ಎದೆಗೆ ಹರುಷ ಚಿತ್ತ ಶಾಂತ |
ತಾಯ ಮಡಿಲೊಳು ತಾಯೆ ಆಗಿ
ಮುದದಿ ಹಕ್ಕಿಯಂತೆ ನಮ್ಮ
ಪ್ರಕೃತಿ ಪ್ರೇಮಿ ಶ್ರೀಕಾಂತ ||

Thursday, 27 August 2009

Thursday, 20 August 2009

Friday, 14 August 2009

ಚಿತ್ರ ೧೧೫



ತವಿಶ್ರೀ:

ನಾಲ್ಕು ಬಿಳಿತಲೆಗಳು ನಡುವಿನ್ನೆರಡು
ದೇಗುಲದ ಗೂಡಿನಲಿ ತುಂಬಿಹುದು
ಜೀವನಾನುನುಭವದ ಮೆಲುಕು
ತಿಮ್ಮಕ್ಕನ ಮೇಲ್ವಿಚಾರಿಕೆಯಲಿ ಹುಡುಕು

ದೇಗುಲದಿ ಸ್ವಾಮಿಗೆ ಮಂದಿಯ ಸೇವೆ
ಸ್ವಾಮಿಯ ಕೃಪೆಗಾಗಿ ಬೇಡಿಕೆ
ಮಂದಿಗೆ ತಿಮ್ಮಕ್ಕ ಅಮ್ಮಕ್ಕರ ಸೇವೆ
ಅವರಿಗಿಲ್ಲ ಯಾವುದೂ ಕೋರಿಕೆ

ದೈವ ಸೇವೆಗೆ ಬಂದಿಹರ ಸೇವೆಯೇ ಅವರ ಧ್ಯೇಯ
ಅನವರತ ದುಡಿಮೆಯೇ ಕಾಯ
ಭಕುತರು ಹುಡುಕುತಿಹರು ಕಾಣದ ದೈವವ ಅಲ್ಲಿ ಇಲ್ಲಿ
ಹುಡುಕದೇ ಅನುಭವಿಸುತಿಹರು ತಿಮ್ಮಕ್ಕ ಅಮ್ಮಕ್ಕರು ದೈವ ಸಾನ್ನಿಧ್ಯ

ಬದುಕು ಈರುಳ್ಳಿಯಂತೆ (ನೀರುಳ್ಳಿ ಅಥವಾ ಉಳ್ಳಾಗಡ್ಡಿ)
ಬಲು ಘಾಟು, ಕತ್ತರಿಸಲು ಕಣ್ಣಿನಲ್ಲಿ ನೀರು
ಸುಲಿದಷ್ಟೂ ಪದರಗಳು
ಗಟ್ಟಿಯಾದ ಸಾರವಿಲ್ಲವೇ ಇಲ್ಲ
ತಿರುಳೇ ಇಲ್ಲದ ಸುರುಳಿ
ಸವಿಯಲು ಬಲು ಆನಂದ
ಜೊತೆಗೆ ಬಾಯಿ ವಾಸನೆ

ಬದುಕೂ ಬಲು ಘಾಟು,
ಹಾದಿಯಲ್ಲಿ ಕೆಲವೊಮ್ಮೆ ಕಣ್ಣಿನಲ್ಲಿ ನೀರು
ದಿನಗಳು ಸವೆಯುತ್ತಲೇ ಇರುವುದು
ಆದರೂ ಸಾರ್ಥಕ್ಯದ ದಿನಗಳು ಕಾಣಸಿಗದು
ಬದುಕೂ ಸವಿಯಲು ಬಲು ಆನಂದ
ಆ ಸವಿಯ ಹಿಂದೆಯೇ ದುರ್ವಾಸನೆ (ಕರ್ಮಫಲ ಎನ್ನೋಣವೇ)

ದುರ್ವಾಸನೆಯಲೂ ದೈವ ಸಾಕ್ಷಾತ್ಕಾರ
ಅದನು ಅಮ್ಮಕ್ಕ ತಿಮ್ಮಕ್ಕರು ತೋರುತಿಹರು

Wednesday, 5 August 2009

ಚಿತ್ರ ೧೧೪



ತವಿಶ್ರೀ:
ಕುಳಿತಲ್ಲೇ ನಿದ್ರೆ
ಸೊಂಪಾದ ನಿದ್ರೆ
ಹಗಲುಗನಸು ಕಾಣುವಂತಹ ನಿದ್ರೆ
ಆಯಾಸ ತಣಿಸುವ ನಿದ್ರೆ

ಆಲದ ಮನೆಯಲಿ ಸವಿ ನಿದ್ರೆ
ಸಿಹಿ ಕಹಿಯ ಅರಿವಾಗದಿದ್ರೆ
ಮರಳಿ ಚೈತನ್ಯ ಮೂಡಿಸುವ ಮುದ್ರೆ
ಜೀವನದಲಿ ಮೂಡುವುದಿಲ್ಲ ತೊಂದ್ರೆ

Wednesday, 29 July 2009

Thursday, 23 July 2009

ಚಿತ್ರ ೧೧೨



ತವಿಶ್ರೀ :

ಎತ್ತ ನೋಡಿದರತ್ತ ಹಸುರು
ಕಾನನ ಸಿರಿಯ ವೈಭವ
ಮೇಲೆ ತಣ್ಣನೆ ಮೋಡದ ಹೊದಿಕೆ
ಕೆಳಗೆ ಕುಳಿರ್ಚಳಿಯ ಹಾಸುಗೆ

ಎಲ್ಲೂ ಬಿತ್ತಿರದ ಬೆಳೆ
ಎಲ್ಲೆಲ್ಲೂ ಬೆಳೆದಿಹ ಕಳೆ
ಆ ನೆಲಕೆ ಬೇಕಿಹುದೀ ಮಳೆ
ಎಲ್ಯಾರಿಗೂ ಬೇಡದ ಮಳೆ

ಹನಿ ಹಾಕುತಿಹ ಜಟಿಪಿಟಿ ತಾಳ
ಹೊಟ್ಟೆ ಕೇಳುತಿಹೆ ಬಿಸಿ ಬಿಸಿ ಹಪ್ಪಳ
ಬಿಡಿಸಿದಾಗ ಬಿಚ್ಚಿ ತಲೆ ಕಾಯುವ ಛತ್ರಿ
ಅದಿಲ್ಲದಿರೆ ನಿಸರ್ಗಕೆ ತಲೆದಂಡ :)

Thursday, 16 July 2009

ಚಿತ್ರ ೧೧೧


ತವಿಶ್ರೀ :

ಪತ್ತೇದಾರ ಪುರುಷೋತ್ತಮ ಲಾಂಗ್ ಓವರ್ ಕೋಟು, ಫೇಲ್ಟ್ ಹ್ಯಾಟು, ಕಪ್ಪು ಕನ್ನಡಕ, ಗಮ್ ಬೂಟ್ಸ್ ಧರಿಸಿ ಹೊರಟಿದ್ದಾನೆ. ಜನ ದನ ಯಾವುವೂ ಇಲ್ಲದ ಈ ಪ್ರದೇಶದಲ್ಲಿ ಇವನಿಗೇಕೀ ವೇಷ? ಜನನಿಬಿಡ ಈ ಕಾಡು ಗುಡ್ಡ ಬೆಟ್ಟದಲಿ ಇವನಿಗೇನು ಕೆಲಸ? ಜೀವನದಲ್ಲೆಂದೂ ಟ್ರೆಕ್ಕಿಂಗ್ ಹೋಗದವನಿಗೆ ಈ ವೇಷ ಎಲ್ಲಿ ಸಿಕ್ಕಿತೋ ಏನೋ? ಅದೂ ಅಲ್ಲದೇ ಅವನೊಬ್ಬನೇ ಯಾಕೆ ಟ್ರೆಕ್ಕಿಂಗ್ ಹೋಗುತ್ತಿದ್ದಾನೆ. ಸಾಮಾನ್ಯವಾಗಿ ಅವನೆಲ್ಲಿಗೇ ಹೊರಟರೂ ಅವನ ಅಸಿಸ್ಟೆಂಟ್ ಕಿರಾತಕ ಕಿಟ್ಟಣ್ಣ ಬೆಂಗಾವಲಾಗಿ ಇದ್ದೇ ಇರುತ್ತಾನೆ. ಆದರಿವತ್ತು ಪುರುಷೋತ್ತಮನೊಬ್ಬನೇ ಹೋಗುತ್ತಿದ್ದಾನೆ. ಏನೋ ವಿಚಿತ್ರವಾಗಿದೆಯಲ್ಲ, ಎಂದು ನಾನವನನ್ನು ಹಿಂಬಾಲಿಸಿದೆ.

ಭರ ಭರ ದಾಪುಗಾಲು ಹಾಕಿ ಹೋಗುತ್ತಿದ್ದವನನ್ನು ಸಮೀಪಿಸಲು ನಾನು ಓಡಲೇ ಬೇಕಾಯಿತು. ಈ ಮಧ್ಯೆ ಓಡುತ್ತಿರುವಾಗ ನನ್ನ ಚಪ್ಪಲಿಯ ಉಂಗುಷ್ಠ ಕಿತ್ತು ಹೋಯಿತು. ಚಪ್ಪಲಿಗಳನ್ನು ಅಲ್ಲಿಯೇ ಬಿಸಾಕಿ ಹಿಂದೆ ಓಡಿದೆ. ಅನತಿ ದೂರದಲ್ಲಿರಲು, ಪುರುಷೀ ಅಂತ ಕೂಗಿದೆ. ಚಿರಪರಿಚಿತ ಧ್ವನಿ ಕೇಳಿದರೂ ಆತ ಹಿಂದೆ ನೋಡಲಿಲ್ಲ. ಏನೋ ಅಚಾತುರ್ಯ ಸಂಭವಿಸಿದೆ ಎಂದಂದುಕೊಂಡು, ಇನ್ನೂ ರಭಸದಿಂದ ಓಡಿ, ಆತನ ಓವರ್ ಕೋಟನ್ನು ಹಿಂಭಾಗದಿಂದ ಜಗ್ಗಿ ಆತನನ್ನು ನಿಲ್ಲಿಸಿದೆ.

’ಏನಯ್ಯಾ ಇದು ವೇಷ? ಯಾಕಯ್ಯಾ ನನ್ನ ಕರೆಗೂ ಓಗೊಡುತ್ತಿಲ್ಲ? ಎಲ್ಲಯ್ಯಾ ನಿನ್ನ ಕಿರಾತಕ ಹಿಂಬಾಲಕ?’ ಎಂದೆಲ್ಲ ಪ್ರಶ್ನೆಗಳನ್ನೂ ಒಂದೇ ಉಸುರಿನಲ್ಲಿ ಉಸುರಿದೆ. ಓಡು ನಡಿಗೆಯಲ್ಲಿದ್ದ ಆತನೂ ಏದುಸಿರು ಬಿಡುತ್ತಿದ್ದ. ಮೇಲಕ್ಕೆ ಬೆರಳೆತ್ತಿ, ಖಿನ್ನ ಮುಖವನ್ನು ನನ್ನೆಡೆಗೆ ಪ್ರದರ್ಶಿಸಿದ. ಒಂದೆರಡು ಕ್ಷಣಗಳ ತರುವಾಯ, ’ಇನ್ನೆಲ್ಲಿಯ್ಯ ಕಿಟ್ಟಣ್ಣನಯ್ಯಾ? ಆತನ ಕೊಲೆ ಆಗಿದೆ. ನಿನಗೇ ಗೊತ್ತಿರುವಂತೆ ನಿನ್ನೆ ನಾನೂ ಮತ್ತು ಕಿಟ್ಟಣ್ಣ ಇದೇ ಕಾಡಿನ ಸರಹದ್ದಿನಲಿ, ಯಾವುದೋ ಕೇಸೊಂದಕ್ಕಾಗಿ ಬಂದೆವು. ಕಾಡಿನ ಮುಖದಲ್ಲಿಯೇ ಇರುವ ಪಾಳು ಬಂಗಲೆಯಲ್ಲಿ ಉಳಿದುಕೊಂಡಿದ್ದೆವು. ಇಂದು ಬೆಳಗಿನ ಜಾವ ನಾಲ್ಕು ಘಂಟೆಯ ವೇಳೆಯಲ್ಲಿ, ಬಹಿರ್ದೆಶೆಗೆಂದು ಹೋಗಿದ್ದ ಕಿಟ್ಟಣ್ಣನನ್ನು, ಹಿಂದಿನಿಂದ ಯಾರೋ ಮಚ್ಚಿನಲ್ಲಿ ಹೊಡೆದು, ಸಾಯಿಸಿದ್ದಾರೆ. ಆತನ ರುಂಡವೊಂದು ಮಾತ್ರ ಈ ಕಾಡಿನ ಬಂಗಲೆಯ ಹಿಂಭಾಗದಲ್ಲಿ ಸಿಕ್ಕಿದೆ. ಆತನ ಮುಂಡ ಎಲ್ಲಿ ಹೋಯಿತೋ ತಿಳಿಯದಾಗಿದೆ. ಅದನ್ನು ಹುಡುಕ ಹೊರಟಿರುವೆ. ಅದಕ್ಕಾಗಿಯೇ ಯಾರಿಗೂ ಹೇಳದೇ, ಎಲ್ಲಿಯೂ ನಿಲ್ಲದೇ ನಾನೊಬ್ಬನೇ ಹೊರಟು ಬಂದಿರುವೆ. ಈಗ ಪೊಲೀಸರೂ ನನ್ನ ಕಡೆ ಸಂಶಯಾಸ್ಪದವಾಗಿ ನೋಡುತ್ತಿದ್ದು, ನನ್ನ ಹಿಂದೆಯೇ ಬಿದ್ದಿದ್ದಾರೆ. ಮೊದಲೀಗ ನಾನು ನನ್ನನ್ನು ಪೊಲೀಸರಿಂದ ರಕ್ಷಿಸಿಕೊಳ್ಳಬೇಕು. ನಂತರ ಕಿಟ್ಟಣ್ಣನ ಮುಂಡವನ್ನು ದೊರಕಿಸಿಕೋಬೇಕು. ಇದುವರೆವಿಗೆ ಯಾರಿಗೂ ಈ ವಿಷಯವನ್ನು ಅರುಹಿಲ್ಲ. ನೀನೇ ಮೊದಲಿಗ. ನನಗೆ ಸಾಥಿ ನೀಡುವೆಯಾ? ಆಗುವುದಿಲ್ಲ ಎಂದು ಮಾತ್ರ ಹೇಳಬೇಡ’.

ಏನೂ ಕೆಲಸವಿಲ್ಲದೇ, ಬರಹಕ್ಕೂ ಮನಸಿಲ್ಲದ ನಾನು ಪುರುಷೋತ್ತಮನೊಂದಿಗೆ ಹೊರಡಲು ತಕ್ಷಣ ಒಪ್ಪಿಗೆ ನೀಡಿದೆ.

ಇದು ಇಲ್ಲಿಯವರೆವಿಗೆ ನಡೆದಿರುವ ಪ್ರಸಂಗ. ನಮ್ಮ ಕೆಲಸ ಆದ ನಂತರ ಮುಂದಿನ ವರದಿಯನ್ನು ನಿಮ್ಮ ಮುಂದಿಡುವೆ. ಅಲ್ಲಿಯವರೆವಿಗೆ ತಾಳ್ಮೆಯಿಂದಿರಿ. ಯಾರಿಗಾದರೂ ನನಗಿಂತ ಮೊದಲೇ ಈ ಕೇಸಿನ ಬಗ್ಗೆ ಗೊತ್ತಾದರೆ, ಅವರು ಇಲ್ಲಿ ಬರಹವನ್ನು ಮುಂದುವರೆಸಬೇಕೆಂದು ಕೋರುವ

ಇತಿ ನಿಮ್ಮ

೯೯೯

Wednesday, 8 July 2009

ಚಿತ್ರ ೧೧೦



ತವಿಶ್ರೀ :

ಇದೇನಾ ಜಲಸಮಾಧಿ


ಗಾಳಿಯೊಡನೆ ಹಾರಿದ ಆಷಾಢ
ಹಿಂದೆಯೇ ಸೋ ಎನುವ ಶ್ರಾವಣ
ಎಲ್ಲೆಲ್ಲೂ ಎಡಬಿಡದ ಮುಸಲಧಾರೆ
ಕಳೆ ಕೀಳಲು ಹೊರಟಿಹಳು ನೀರೆ

ಸುರಿಯುತಿದೆ ಜೋರಿನ ಮಳೆ
ತಂಪಾಯಿತು ಕಾದು ರೋಸಿದೆ ಇಳೆ
ಹೊರಗೆ ತೊಳೆಯುತಿದೆ ಕೊಳೆ
ಒಳಗೆ ಕಲ್ಮಶದ ಹೊಳೆ

ಇಳಿಯುತಿದೆ ಗಾಜಿನ ಹೊರಗೆ ಹನಿ
ಪಸೆ ಆರಿದ ಬಾಯೊಳಗಿಲ್ಲ ಹನಿ
ಕಗ್ಗತ್ತಲ ನಿರ್ಮಿಸಿದ ಕಾರ್ಮೋಡ
ಆವ ಕಾಲದಲಿ ಚಕ್ರ ನೋಡುವುದು ಹೊಂಡ

ಮೊರೆತದ ಜಲರಾಶಿ ಒಳನುಗ್ಗಲು
ಸೆಟೆದುಕೊಳ್ಳುತಿಹ ಬಾಗಿಲು
ಇಂಧನವು ಕೈ ಮುಗಿದು ಮಲಗುತಿರಲು
ಭೋರ್ಗರೆಯುತಿದ್ದ ಕಾರು ತಣ್ಣಗಾಗಲು
ಆಗೊಲೊಲ್ಲದು ಒಳೆಗೆಳೆದ ಉಸಿರು ಹೊರಗೆ ಬಿಡಲು

ಸೂಚನೆ:

೨೦೦೭ನೆಯ ಇಸವಿ ಜುಲೈ ತಿಂಗಳಿನಲಿ ಇಂತಹ ಸನ್ನಿವೇಶಗಳು ಮುಂಬಯಿಯಲ್ಲಿ ಸಂಭವಿಸಿ ಹಲವು ಮಂದಿ, ತಾವು ಪ್ರಯಾಣಿಸುತ್ತಿದ್ದ ಕಾರಿನೊಳಗೇ ಸಾವನ್ನಪ್ಪಿದರು.

Thursday, 2 July 2009

ಚಿತ್ರ ೧೦೯



ತವಿಶ್ರೀ:

ರಾಮು, ಪುಟ್ಟ, ಪುಟ್ಟಿ ಮತ್ತು ಕೃಷ್ಣ ಗೆಳೆಯರು. ಅದೊಂದು ಭಾನುವಾರ. ಒಮ್ಮೆ ರಾಮುವಿನ ತಂದೆ ಮನೆಯಲ್ಲಿರಲಿಲ್ಲ. ಕಛೇರಿಗೆ ಪ್ರತಿದಿನ ಒಯ್ಯುತ್ತಿದ್ದ ಬೈಸಿಕಲ್ಲನ್ನು ಮನೆಯಲ್ಲಿಯೇ ಬಿಟ್ಟು, ಸಂತೆಯಿಂದ ತರಕಾರಿ ತರಲು ಹೋಗಿದ್ದರು. ಎಂದಿನಂತೆ ಅಮ್ಮ ಊರ ಬಾವಿಯಿಂದ ಸಿಹಿನೀರನ್ನು ತರಲು ಹೋಗಿದ್ದಳು. ತುಂಟ ರಾಮು ತನ್ನ ತಮ್ಮ ಕೃಷ್ಣ ಮತ್ತು ಪಕ್ಕದ ಮನೆಯ ಪುಟ್ಟ ಪುಟ್ಟಿಯನ್ನು ಜೊತೆ ಮಾಡಿಕೊಂಡು ಮನೆಯ ಪಕ್ಕದಲ್ಲಿರುವ ಉದ್ಯಾನವನದಲ್ಲಿ ಸೈಕಲ್ ಕಲಿಸಲು ಕರೆದೊಯ್ದನು.

ರಾಮುವಿಗೆ ಸೈಕಲ್ ಸವಾರಿ ಮಾಡಲು ಬರುತ್ತಿತ್ತು. ಆದರೆ ಇನ್ನು ಮೂವರು ಚಿಣ್ಣರಿಗೆ ಅದು ತಿಳಿಯದು. ಬಹಳ ದಿನಗಳಿಂದ ’ಸೈಕಲ್ ಸವಾರಿ ಕಲಿಸಿಕೊಡೆಂದು’ ರಾಮುವನ್ನು ಪೀಡಿಸುತ್ತಿದ್ದವರಿಗೆ ಇಂದು ಸಕಾಲ ಒದಗಿತ್ತು. ಸ್ವತಂತ್ರ ಪಕ್ಷಿಯಂತೆ ರಾಮುವು ಉದ್ಯಾನವನವನ್ನು ಒಂದು ಸುತ್ತು ಹಾಕಿದ ನಂತರ ಒಂದೇ ಕೈನಲ್ಲಿ ಸೈಕಲಿನ ಕೈಪಿಡಿಯನ್ನು ಹಿಡಿದು ಇನ್ನೊಂದು ಸುತ್ತು ಹಾಕಿದ. ತದನಂತರ ಪುಟ್ಟಿಯನ್ನು ಹಿಂದೆ ಕುಳ್ಳಿರಿಸಿಕೊಂಡು ಒಂದು ಸುತ್ತು ಹಾಕಿ, ನಂತರದ ಸುತ್ತಿನಲ್ಲಿ ಮುಂದೆ ಪುಟ್ಟ ಮತ್ತು ಹಿಂದೆ ಪುಟ್ಟಿಯರನ್ನು ಸುತ್ತು ಹಾಕಿಸಿದ. ಇದೆಲ್ಲವನ್ನೂ ತದೇಕಚಿತ್ತದಿಂದ ನೋಡುತ್ತಿದ್ದ, ಸೈಕಲ್ ಸವಾರಿ ಬಾರದ ಕೃಷ್ಣ ತನಗೂ ಒಂದು ಸುತ್ತು ಕೊಡು ಎಂದ. ಅದಕ್ಕೆ ಉತ್ತರವಾಗಿ ರಾಮುವು, ಮೊದಲು ಹಿಂದೆ ಕುಳಿತು ಒಂದು ಸುತ್ತು ಹೋಗೋಣ ಬಾ, ನಂತರ ನೀನು ಕಲಿಯುವಂತೆ ಎಂದು ಹೇಳಿದ. ಸ್ವಲ್ಪ ಮೊಂಡು ಸ್ವಭಾವದ ಕೃಷ್ಣ ಅಷ್ಟು ಸುಲಭಕ್ಕೆ ಅಣ್ಣನಿಗೆ ಮಣಿಯಲಿಲ್ಲ. ತನಗೆ ಸವಾರಿ ಬರುವುದೆಂದೂ, ತಕ್ಷಣವೇ ಸೈಕಲನ್ನು ತನಗೆ ಕೊಡಬೇಕೆಂದೂ, ಇಲ್ಲದಿದ್ದರೆ ಅಪ್ಪ ಅಮ್ಮನಿಗೆ ಹೇಳಿ ತಕ್ಕ ಶಾಸ್ತಿ ಮಾಡಿಸುತ್ತೇನೆಂದೂ ಹೆದರಿಸಿದ. ಈ ಮಾತುಗಳಿಗೆ ಹೆದರಿದ ರಾಮುವು ಸೈಕಲನ್ನು ಕೃಷ್ಣನಿಗೆ ಕೊಟ್ಟುಬಿಟ್ಟನು. ಸುಲಭದಲ್ಲಿ ಮೊದಲ ಬಾರಿಗೆ ತನ್ನ ಕೈಗೆ ಸೈಕಲ್ ಸಿಕ್ಕಿದ ಸಂಭ್ರಮದಲ್ಲಿ ಹೀಗೆ ಹಾಡು ಹೇಳಿಕೊಂಡು ಸವಾರಿ ಮಾಡಲು ಅಣಿಯಾದ, ಪುಟ್ಟ ಕೃಷ್ಣ.

ಸೈಕಲೇರಿ ಹೋಗುವಾ ಒಂದು ಸುತ್ತು
ಬಾರೇ ಜುಟ್ಟು, ಬಾರೋ ಪುಟ್ಟು, ಬಾರೋ ಕಿಟ್ಟು
ಮನೆಯಲ್ಲಿಲ್ಲ ಅಮ್ಮ ಅಪ್ಪ
ಇನ್ಯಾರ ಭಯ ನಮಗಿಲ್ಲಪ್ಪ

ನಾನೇ ನಿಮಗೆಲ್ಲ ಲೀಡರ್
ಇಲ್ಲೀಗ ಸೈಕಲಿನ ಡೀಲರ್
ಹೇಳಿದಂತೆ ನೀವು ಕೇಳದಿರೋ
ನಿಂಗೊಂದ ಛಾನ್ಸು ಕೊಡುವಿನೆರೋ

ಹಾಡುತಾ ಆಡುತಾ ನಮ್ಮ ಪುಟ್ಟು
ಹಾಕಿದ ಉದ್ಯಾನವನವ ಒಂದು ಸುತ್ತು
ಹಿಂದಿನ ಚಕ್ರಕ್ಕೆ ಮುಳ್ಳೊಂದು ಚುಚ್ಚಿತ್ತು
ಠುಸ್ಸೆಂದು ಅದರೊಳ ಗಾಳಿ ಇಲ್ಲವಾಗಿತ್ತು

ಸೈಕಲಿಂದ ಕೆಳಗೆ ಬಿದ್ದ
ಆಸರೆ ಇಲ್ಲದೇ ಮೇಲೇಳೇದಾಗಿದ್ದ
ಪೆಡಲು ಬಾರಿನ ಮಧ್ಯೆ ಕಾಲು
ಅರಳಿದ್ದ ಮುಖ ಜೋಲು ಜೋಲು

ಏಳಲಾಗದೇ ನೋವೆಂದು ಒದರಿದ್ದ
ರಾಮುವಿನ ಆಸರೆಯಲಿ ಮನೆ ಸೇರಿದ್ದ
ಕಾಲಿನ ಮೂಳೆ ಮುರಿದಿತ್ತು
ನೋವಿನಿಂದ ಕಣ್ಣೀರು ಸುರಿದಿತ್ತು

ಅಪ್ಪ ಅಮ್ಮಗೆ ತಿಳಿಯದೇ ಸೈಕಲಿಗೆ ಬಂದದ್ದು ತಪ್ಪೆಂದರಿವಾಗಿತ್ತು.


ಸುಪ್ತದೀಪ್ತಿ :

ಬೇಸಿಗೆ ರಜೆಯಲಿ ಬಾಡಿಗೆ ಸೈಕಲು
ಜೊತೆಯಲಿ ನಡೆದರು ಬೀದಿಯ ಮಕ್ಕಳು
ಊರಿನ ತೋಪಲಿ ಹೊಸದೇ ಆಟ
ಅರಿಯದ ಕಿರಿಯಗೆ ಹಿರಿಯನ ಪಾಠ

ಕತ್ತರಿ ಕಾಲು ಹಾಕುತ ಏರು
ಪೆಡಲ್ ತುಳಿದು ಹಿಡಿ ಹ್ಯಾಂಡಲ್ ಬಾರು
ಹಾದಿಯ ಮೇಲೆ ಇರಬೇಕು ಗಮನ
ಕಲಿಕೆಯೇನಲ್ಲ ರಾಕೆಟ್ ವಿಜ್ಞಾನ

ನೀನೂ ಬಾರಮ್ಮ, ಮುಂದಿನ ಸುತ್ತಿಗೆ
ನಾವಿದ್ದೇವೆ ಭಯಬೇಡ, ಹತ್ತು ಮೆಲ್ಲಗೆ
ಎಲ್ಲರಿಗೂ ಇದೆ ಸಮಯಾವಕಾಶ
ಕಲಿಕೆಗೆ ಕೊಡುವನು ಸೈಕಲಂಗಡಿ ಪಾಷ

Friday, 26 June 2009

ಚಿತ್ರ ೧೦೮


ತವಿಶ್ರೀ:

ಕರ್ಣಕುಂಡಲ

ಕೃಪಾ ತಾಯಿಯಿಲ್ಲದ ತಬ್ಬಲಿ. ಹುಟ್ಟಿದ ಕೂಡಲೇ ಆಕೆಯ ತಾಯಿ ತೀರಿ ಹೋದಳು. ತದನಂತರದಿಂದ ತಂದೆಯೇ ತಾಯಿಯ ಸ್ಥಾನವನ್ನೂ ಹೊತ್ತು ಸಾಕಿ ಸಲುಹುತ್ತಿರುವನು. ಕಡುಬಡತನದಲ್ಲಿರುವ ತಂದೆಯ ನೊಗಕ್ಕೆ ಸಾಥಿ ಕೊಟ್ಟು ಜೀವನಬಂಡಿಯನ್ನು ಸಾಗಿಸಲು ಮುಂದೆ ಬಂದಿದ್ದವಳು ಕರುಣಾ. ಆಕೆಯ ಅಕಾಲಿಕ ಮರಣದಿಂದ ಕಂಗೆಟ್ಟ ತಂದೆ ಕೃಷ್ಣಪ್ಪ, ಮಗುವಿಗೆ ಮಲತಾಯಿಯ ಸೋಂಕು ತಟ್ಟದಿರಲೆಂದೆ ಮರು ಮದುವೆ ಆಗಲಿಲ್ಲ.

ಕರುಣಾ ಸಾಯುವ ಸಮಯದಲ್ಲಿ ಅವಳ ಮೈ ಮೇಲಿದ್ದ ಆಭರಣವೆಂದರೆ ಒಂದು ಜೊತೆ ಕಿವಿಯೋಲೆ. ಮದುವೆಯ ಸಮಯದಲ್ಲಿ ತನ್ನ ತಾಯಿಯ ಮನೆಯಿಂದ ಬಳುವಳಿಯಾಗಿ ಬಂದ ಕಿವಿಯೋಲೆಯನ್ನು ಅವಳು ತನ್ನ ಪ್ರಾಣಕ್ಕಿಂತಲೂ ಹೆಚ್ಚಾಗಿ ಪ್ರೀತಿಸುತ್ತಿದ್ದಳು. ಆಕೆಯ ನೆನಪಾಗಿ ತಂದೆ ಕೃಷ್ಣಪ್ಪ ಪುಟ್ಟ ಕೃಪಾಳಿಗೆ ಓಲೆಯನ್ನು ಕಿವಿಗೇರಿಸಿದ್ದನು. ಎಂದಿಗೂ ಬಿಟ್ಟಿರಲಾರದ ಆ ಕಿವಿಯೋಲೆ, ಮಹಾಭಾರತದ ಕರ್ಣನ ಪ್ರೀತಿಯ ಕರ್ಣಕುಂಡಲಗಳಷ್ಟೇ ಅಪ್ರತಿಮವಾದುದೆಂದರೆ ಅತಿಶಯೋಕ್ತಿಯಲ್ಲ.

ಒಂದು ದಿನ ಬೆಳಗ್ಗೆ ಕೃಪಾ ಎದ್ದು ಹಲ್ಲುಜ್ಜುತ್ತಿರುವಾಗ, ಅವಳ ಕಿವಿಯಲ್ಲಿ ಕಿವಿಯೋಲೆ ಕಾಣದೇ, ಕೃಷ್ಣಪ್ಪನಿಗೆ ಘಾಬರಿಯಾಯಿತು. ಇದರ ಬಗ್ಗೆ ಇನ್ನೂ ತಿಳಿವರಿಯದ ಆಕೆಯ ಮನಸ್ಸಿಗೆ ಎಷ್ಟು ನೋವಾಗಬಹುದೆಂಬುದನ್ನು ಅರಿತ ಆತ, ತಕ್ಷಣ ಮನೆಯೆಲ್ಲವನ್ನೂ ಜಾಲಾಡಿದನು. ಆದರೂ ಕಾಣಸಿಗದ, ಕಿವಿಯೋಲೆಯಂತೆಯೇ ಇರುವ ಇನ್ನೊಂದು ಜೊತೆ ಓಲೆಯನ್ನು. ಆಕೆಗೆ ತಿಳಿಯದಂತೆ ಬೇಗ ಅಂಗಡಿಯಿಂದ ತರಲೆಂದು ಹೊರಟನು. ಆ ಬೆಳಗಿನ ಜಾವದಲ್ಲಿ ಯಾವ ಅಂಗಡಿ ತಾನೇ ತೆರೆದಿರುತ್ತದೆ. ಚಿಂತಿತನಾದ ಕೃಷ್ಣಪ್ಪ, ತನ್ನ ಮಗಳ ಅಳು ಮೋರೆಯನ್ನು ನೋಡುವ ಶಕ್ತಿಯಿರದೇ, ಓಲೆಯ ಅಂಗಡಿ ತೆರೆದು, ತಾನು ಮನೆಗೆ ಅದನ್ನು ತರುವವರೆವಿಗೂ ಮಗಳ ಕಣ್ತಪ್ಪಿಸುವುದೇ ಕ್ಷೇಮವೆಂದೆ ಹೊರಗೇ ಉಳಿದನು.

ಈ ಮಧ್ಯೆ ರಾತ್ರಿ ಇದ್ದಕ್ಕಿದ್ದಂತೆ ಕಿವಿನೋವು ಹೆಚ್ಚಾಗಿ, ಕೃಪಾ ನಿದ್ರೆಯಿಂದ ಎಚ್ಚತ್ತಳು. ತನ್ನನ್ನು ತಾಯಿ ತಂದೆ ಎರಡೂ ಸ್ಥಾನದಲ್ಲಿ ಕಾಪಾಡುತ್ತಿರುವ ಕೃಷ್ಣಪ್ಪನನ್ನು ಎಬ್ಬಿಸಿ ತೊಂದರೆ ಕೊಡಬಾರದೆಂದು ತಾನೇ, ಕಿವಿನೋವಿನ ಔಷಧಿಯನ್ನು ಹಾಕಿಕೊಂಡಳು. ಹೀಗೆ ಹಾಕಿಕೊಳ್ಳುವಾಗ, ಓಲೆ ಅಡ್ಡ ಬಾರದಿರಲೆಂದು ಅದನ್ನು ತೆಗೆದು, ದಿಂಬಿನ ಕೆಳಗಿಟ್ಟಿದ್ದಳು. ಬೆಳಗ್ಗೆ ಎದ್ದು ಹಲ್ಲುಜ್ಜಿದ ನಂತರ ಓಲೆಯನ್ನು ಹಾಕಿಕೊಳ್ಳೋಣವೆಂದುಕೊಂಡಿದ್ದಳು.

ಹಲ್ಲುಜ್ಜಿ ಓಲೆ ಏರಿಸಿಕೊಂಡು, ಅಡುಗೆ ಮನೆಯೊಳಗೆ ಕಾಲಿಟ್ಟ ಕೃಪಾ ತನ್ನ ತಂದೆಯನ್ನು ಕಾಣದಾದಳು. ಮನೆಯೆಲ್ಲಾ ಹುಡುಕಿದರೂ, ಅಕ್ಕ ಪಕ್ಕದವರೆಲ್ಲ್ರರಲ್ಲೂ ಕೇಳಿದರೂ, ತಂದೆಯ ಸುದ್ದಿ ತಿಳಿಯದೇ ಹೋಗಿ, ಆತನ ಪ್ರಾಣಕ್ಕೇನಾದರೂ ಅಪಾಯವಾಯಿತೇ ಎಂಬ ಭಯ ಆಕೆಯನ್ನಾವರಿಸತೊಡಗಿತು.

ಮುಂದಿನದು ... ಓದುಗರ ತಲೆಯೊಳಗೆ ಬಿಟ್ಟದ್ದು ... :)

Wednesday, 17 June 2009

ಚಿತ್ರ ೧೦೭



ತವಿಶ್ರೀ:

ತಲೆಯ ಮೇಲೆ ಕುಟ್ಟಿ
ಒಳಗೆ ಬಾ ಕುಟ್ಟಿಗನೇ
ಪ್ಲಾಸ್ಟಿಕ್ಕಲ್ಲವೋ ಇದು
ಚಿಂತನೆಯ ಚಿಲುಮೆಯು

ಕುಟ್ಟಿಸಿಕೊಳ್ಳಲು
ಕಾಯುತಿಹುವು ಎನ್ನೆದೆಯ ೧೦೪ ಕೀಲಿಗಳು
ಏಟು ತಿಂದರೂ ಓಡಿಹೋಗದಂತಿರಲು
ಗಟ್ಟಿಯಾಗಿ ಹಿಡಿದಿಹುದು
ಒಂದು ಮಣೆಯು

ಯಾವುದೇ ಭಾಷೆಯ ಅರಿವಿಲ್ಲದಿದ್ದರೇನಂತೆ
ಕುಟ್ಟಿ ಕುಟ್ಟಿ ತೋರಿಸಬಹುದು
ಅದರಲೂ ಮನ ಬಂದಂತೆ
ತನು ತೋರಿದಂತೆ
ನಿನ್ನ ತಲೆಯಲಿರದ ಜಾಣ್ಮೆಯ

ನಿನ್ನ ಅಣತಿಯೇ ಎನಗೆ ಪ್ರಾಪ್ತಿ
ಅದರದೂ ಕೊಡುವೆ ಗಣತಿ
ನಿನಗೆ ತಿಳಿದಿಹುದು ಡಾಸು ಲೈನಕ್ಸು
ಎನಗೆಲ್ಲವೂ ಬೂಸು ಬುರ್ನಾಸು

Wednesday, 10 June 2009

ಚಿತ್ರ ೧೦೬



ತವಿಶ್ರೀ:

ಕಣ್ಣು ಕೋರೈಸುತಿಹುದು
ಶಕ್ತಿಯ ತೋರುತಿಹುದು
ನೇಸರನಿಗೆ ಸಡ್ಡು ಹೊಡೆಯುವ ಸವಾಲೆಸೆಯುತಿಹುದು

ಅಪರಂಜಿ ಚಿನ್ನದ
ತಲೆಯ ಮೇಲೆ ಹೊಡೆದಂತಿಹುದು
ನಕಲೀ ರೋಲ್ಡ್ ಗೋಲ್ಡ್

ನೀ ಸವಾಲೆಸೆಯಬಲ್ಲೆಯೋ
ನಾ ಸವಾಲೆಸೆಯಬಲ್ಲೆನೋ
ನೋಡೇ ಬಿಡೋಣ

ಅಸಲೀ ಮಾಲು
ಮಾಡಬೇಕು ಜಾಗ ಖಾಲಿ :D

******************

ಬೆಳಗಾದೊಡೆ
ನೇಸರನ ಪ್ರಖರತೆ
ಮಂಕಾಯಿತು ದೀಪ
ಬಯಲಾಯಿತು ನಕಲೀ ಚಿನ್ನ

Wednesday, 3 June 2009

ಚಿತ್ರ ೧೦೫



ಜಲನಯನ:

ಎಚ್ಚೆತ್ಕೋಳಿ ಮುಂಚೇಯ

ಎಚ್ಚೆತ್ಕೋಳಿ ಮುಂಚೇಯ
ಇಳಿವಯಸ್ನಾಗ್ ಇವ್ನಿ
ದುಡ್ಯಾಕಾಯ್ತದಾ ನಿಮ್ಮಂಗೆ ?
ನಾನಲ್ಲೇಯವ್ವಾ ಜವ್ನಿ
ಒಟ್ಟೆ-ಬಟ್ಟೆ ಕಟ್ಟೀ ಸಾಕ್ದೆ
ದುಡ್ದು ಮದ್ವಿ ಆಗೋಗಂಟ
ಅಗ್ಲು-ರಾತ್ರೆ ಅನ್ದೇ ತಂದಾಕ್ದೆ
ಸಾಲನೋವಾಲನೋ ಮಾಡಿ
ನೂರ್ ಸುಳ್ಳೇಳಿ ನಿನ್ಮದ್ವೆ ಮಾಡ್ದೆ
ಗಂಡ ಓದ್ಮ್ಯಾಲೆ ನಿನ್ನಣ್ಣನ್ ಓದ್ಗೆ
ಅಡ ಇಟ್ಟ ಬೂಮಿ ಬುಡ್ಸ್ಕಳ್ಳಾಕಾಗ್ದೆ
ಅವನ್ಮದ್ವೇಗೆ ಅಂತ ಮಾರಾಕ್ದೆ
ಅವ್ನೋ ಇದ್ ಮನೆ ಬರ್ಸ್ಕಂಡ
ಇದ್ಬದ್ದ ವಡ್ವೆ ಹೆಂಡ್ತಿಗಂತ ಕಸ್ಕೊಂಡ
ಇಳೀವಯಸ್ನಾಗೆ ಕಲ್ಲೊರ್ತೀನಿ
ಮರ ಚೆಕ್ಕೆ ಮಾರಿ ಒಟ್ಟೆ ಒರ್ಕೋತಿವ್ನಿ
ಕಡೀತಾ ಇಲ್ವೇ ನೀವೂ
ಅಣ್ಣೂ ಅಂಪ್ಲೂ ಕೊಡೋ ಮರಾವ
ಬಗೀತಾ ಇಲ್ವಾ ಅನ್ನಾಕೊಡೋ
ತಾಯಿ ಒಟ್ಟೇಯ....
ಜ್ವಾಕೆ ಕಣ್ರಪ್ಪಾ ಜ್ವಾಕೆ..!!
ಉರಿಸ್ಬ್ಯಾಡಿ ಅಡ್ದ್ ಒಟ್ಟೇಯಾ
ಏನ್ ಆಕ್ಕಂಡೀರಿ ಕಡ್ದ್ ಕಟ್ಟೇಯಾ?
ಅದ್ಕೇ ಏಳ್ತಿವ್ನಿ ಎಚ್ಚೆತ್ಕೊಳ್ಳಿ
ನೀವು ಎತ್ತೋರ್ಗೆ ಬೂತಾಯ್ಗೆ
ಮಾಡ್ದಂಗೆ ನಿಮ್ಮಕ್ಕ್ಳೂ ನಿಮಗೆ
ಮಾಡೋದಕ್ಕೆ ಮುಂಚೇಯಾ

Friday, 29 May 2009

Thursday, 7 May 2009

Wednesday, 29 April 2009

Wednesday, 22 April 2009

ಚಿತ್ರ ೧೦೧



ಚಿತ್ರಕವನದ ನೂರರ ಗಡಿಯನ್ನ ದಾಟುತ್ತ ನಮ್ಮೊಂದಿಗಿರುವ ಎಲ್ಲ ಸಾಹಿತ್ಯಾಸಕ್ತರಿಗೂ ಅನಂತ ವಂದನೆಗಳು. "ಚಿತ್ರಕವನ" ಹೆಸರು ಸೂಚಿಸುವಂತೆ ಕೇವಲ ಕವನ ಪ್ರಕಾರಕ್ಕೆ ಸೀಮಿತವಾಗಿರದೆ, "ಚಿತ್ರ" ನಿಮ್ಮಲ್ಲಿ ಮೂಡಿಸುವ ಭಾವನೆಗಳ ಬರಹ ಕೂಡ ಆಗಿರಬಹುದು. ಇಲ್ಲಿಯವರೆಗೆ ಹೆಚ್ಚಿನ ಆಸಕ್ತರು ಕವನ ಪ್ರಕಾರವನ್ನೆ ಬರೆದಿದ್ದಾರೆ ಮುಂದೆ ವಿಭಿನ್ನ ಪ್ರತಿಕ್ರಿಯೆಗಳು ಮೂಡಿಬರಲಿ ನಿಮ್ಮಿಂದ ಎಂದು ಆಶಿಸುತ್ತ.

ವಂದನೆಗಳು
ಚಿತ್ರಕವನ ಬಳಗ

...

ತವಿಶ್ರೀ:

ದೇಶದ ನಾಡಿ
ಸುಗ್ಗಿ ಬಂತೋ ಅಣ್ಣ ಸುಗ್ಗಿ
ನಮ್ಮೆಲ್ಲರ ಹೃದಯ ಹಿಗ್ಗಿ ಹಿಗ್ಗಿ
ಮನೆ ಅಂಗಳದಲಿ ತುಂಬುವುದು ಕಾಳು
ಎಲ್ಲರಿಗೂ ಸಿಗುವುದು ಕೂಳು

ಮಾರಣ್ಣ ಸಿಂಗಣ್ಣ
ಕೊಯ್ಲು ಕೊಯುವರು ಹೊಲದಲಿ
ಮೂಟೆ ಮೂಟೆ ರಾಗಿ ಭತ್ತ
ಸುರಿವರು ಮಾಳದಲಿ

ಸಾಕವ್ವ ಮಾರವ್ವ
ಬನ್ನೀರೆ ಜೊಳ್ಳನು ತೂರೂವಾ
ಜೊಳ್ಳ ತೂರಿ
ಕಾಳನು ಕೇರೂವಾ

ಕಾಳಲೇ ಕೂಳು
ಕೂಳಲೇ ಬಾಳು
ಎಲ್ಲ ಸೇರಿ ದುಡಿಯುವಾ
ದೇಶದ ನಾಡಿಯ ಮಿಡಿಯುವಾ


Tuesday, 14 April 2009

ಚಿತ್ರ ೧೦೦



ತವಿಶ್ರೀ:


ಪ್ರತಿಕ್ರಿಯೆಗಳು ಬರಲಿ, ಬರದಿರಲಿ, ಮನ ಮುದುಡಿಸಿಕೊಳ್ಳದೆಯೇ, ವಾರಕ್ಕೊಂದರಂತೆ ಶತಕ ಚಿತ್ರಗಳನ್ನು ಇತ್ತು, ಅನಿಸಿಕೆಗಳನ್ನು ಮೂಡಿಸಲು ಹಲವು ಮನಗಳಿಗೆ ಅನುವು ಮಾಡಿ ಕೊಟ್ಟ ಅಮರ, ಶ್ರೀ ಮತ್ತು ಶ್ರೀನಿಧಿಯವರುಗಳಿಗೆ ಮನಃಪೂರ್ವಕ ಕೃತಜ್ಞತೆಗಳು ಹಾಗೂ ಅಭಿನಂದನೆಗಳು

ಸ್ವಹಿತದೆಡೆಗೇ ಮನ ಮತ್ತೆ ವಸಂತನಾಗಮನ
ಮತ್ತೆ ಮತ್ತೆ ತರು ಲತೆಗಳಲಿ ನವ ಚೇತನ
ನೇಸರನ ತೀಕ್ಷಣತೆಗೆ ಒತ್ತು ಕೊಡುವ ಕಾಲ
ಬರುತಿದೆ ನೀರಿಗಾಗಿ ಬಾಯಿ ಬಿಡುವ ದಿನ

ಮೇಲೇರುತಿದೆ ಉರಿ ಬಿಸಿಲು
ಕಾಲ್ಕೆಳಗೆ ಸುಡು ಕಲ್ನಾರು
ಮರ ಒಣಗಿದರೇನು
ಗಿಡ ಚಿಗುರಿದರೇನು

ಇಂದಿನ ಹಸಿವು ತಣಿಸಬೇಕು
ಮಕ್ಕಳ ನಾಳೆ ಸುಗಮವಾಗಿರಿಸಿರಬೇಕು
ಇದೇ ನನ್ನ ಹಂಬಲ
ಇದಕಾಗೇ ನನ್ನ ಚಿಂತನೆ

ಒಮ್ಮೆ ಕೂಗಿದೆ ನಾನು
ಮಗು ಬೀಳುತಿರಲು,
ಅದ ಹಾಡೆಂದರು
ತಾವು ನಲಿದರು :(

ಹಸಿವಲಿ ನರಳಿದೆ
ಅದನರ್ಥ ಮಾಡಿಕೊಳ್ಳದವರು
ಅದನೂ ಹಾಡೆಂದರು
ಕಥೆ ಕವನ ಕಟ್ಟಿದರು

ಕವಿಯಂತೆ ಮನ ಓಡಿಸಿದರು
ಕಪಿಯಂತೆ ಮರದೆಡೆಗೆ ನೋಟವಿಟ್ಟರು
ನನ್ನಿಂದ ಇನ್ನೂ ಹೆಚ್ಚು ಅಪೇಕ್ಷಿಸಿದರು
ಎನ್ನ ತಿಳಿಯದಾದರು
ತಿಳಿಯಲು ಇಚ್ಛೆಯೂ ಇಲ್ಲದವರು
ತಮ್ಮ ಸಂತಸವೇ ಮಿಗಿಲೆಂದವರು

ನನ್ನಳಲು ನನಗೇ ಗೊತ್ತು
ಮೂಢರಿಗೇನು ತಿಳಿದೀತು!
ನನ್ನ ಸ್ನೇಹಿತೆ ಕಾಗೆಯ
ವೈರಿ ಎಂದರು, ಎನ್ನ ಹೊನ್ನಶೂಲಕೇರಿಸಿದರು

ನಿಮಗೇನು ಗೊತ್ತು? ಹೇಗೆ ತಾನೆ ಗೊತ್ತಾಗಬೇಕು
ನಾನೇನೇ ಉಲಿದರೂ ಹಾಡೆಂದು ಅರ್ಥೈಸುವಿರಿ